ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ರಣಂ ಚಿತ್ರೀಕರಣ ವೇಳೆ ಸಿಲಿಂಡರ್ ಸ್ಫೋಟ, ಲಂಚ ಪಡೆದು 'ಅನುಮತಿ ನೀಡಿದ್ದ ಪೇದೆ' ಅಮಾನತು!

ರಣಂ' ಚಿತ್ರದ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಲಂಚ ಪಡೆದು ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರು: 'ರಣಂ' ಚಿತ್ರದ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಲಂಚ ಪಡೆದು ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.
ನಗರದ ಬಾಗಲೂರಿನ ರಸ್ತೆಯಲ್ಲೇ ಮಾರ್ಚ್ 29ರಂದು 'ರಣಂ' ಚಿತ್ರೀಕರಣ ವೀಕ್ಷಿಸಲು ತಾಯಿ ಹಾಗೂ ಮಗಳು ತೆರಳಿದ್ದರು. ಈ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ ಸುಬೇನಾ ಹಾಗೂ ಮಗಳು ಆಯೇರಾ ಸಾವನ್ನಪ್ಪಿದ್ದರು. ಪೊಲೀಸ್ ಇಲಾಖೆಯ ಆಂತರಿಕ ವೈಫಲ್ಯದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೂಚಿಸಿದ್ದರು. ವರದಿ ಕೈ ಸೇರುತ್ತಿದ್ದಂತೆಯೇ ಬಾಗಲೂರು ಪೊಲೀಸ್ ಠಾಣೆಯ ಪೇದೆ ಭೀಮಾ ಶಂಕರ್ ಅವರನ್ನು ಅಮಾನತು ಮಾಡಿದ್ದಾರೆ ಎಂದು ಹೆಚ್ಚುವರಿ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. 
ಪೇದೆ ಭೀಮಾಶಂಕರ್ ಚಿತ್ರೀಕರಣಕ್ಕೆ ಅನುಮತಿ ಇಲ್ಲದಿದ್ದರೂ, 5,000 ರೂ. ಹಣ ಪಡೆದು ಚಿತ್ರೀಕರಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ ಎಸಗಿರುವುದು ಬೆಳಕಿಗೆ‌‌ ಬಂದಿತ್ತು. ಶೂಟಿಂಗ್ ನಡೆಸುವ ಮುನ್ನ ಚಿತ್ರ ನಿರ್ದೇಶಕ ಅನುಮತಿ ಕೋರಿ ಯಲಹಂಕ ಎಸಿಪಿ ಕಚೇರಿಗೆ ಭೇಟಿ ನೀಡಿದ್ದರು. ಆದರೆ, ಯಲಹಂಕ ಎಸಿಪಿ ಎಂಎಸ್ ಶ್ರೀನಿವಾಸ್ ಸೂಕ್ತ ದಾಖಲೆಮತ್ತು ಸೂಕ್ತ ಮುಂಜಾಗ್ರತ್ರಾ ಕ್ರಮ ಕೈಗೊಳ್ಳುವವರೆಗೂ ಅನುಮತಿ ನೀಡುವುದಿಲ್ಲ ಎಂದಿದ್ದರು. ಇದೇ ಸಮಯವನ್ನು ದುರುಪಯೋಗಪಡಿಸಿಕೊಂಡ ಪೇದೆ ಭೀಮಾ ಶಂಕರ್ ಕರ್ತವ್ಯ ಲೋಪ ಎಸಗಿ ಐದು ಸಾವಿರ ಲಂಚ ಪಡೆದು ಚಿತ್ರೀಕರಣ ನಡೆಸಲು ಅನುಮತಿ ನೀಡಿದ್ದರು ಎಂದು ತಿಳಿದು ಬಂದಿದೆ.
ಇದೀಗ ಲಂಚ ಪಡೆದ ಪೇದೆಯನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT