ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ; ಸೋಷಿಯಲ್ ಮೀಡಿಯಾಗೆ ಪುನರಾಗಮನ

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಗುರುವಾರ(ಜೂನ್ 6)36ನೇ ಹುಟ್ಟುಹಬ್ಬದ ಸಂಭ್ರಮ. ಕಿರಿಕ್ ಪಾರ್ಟಿ ಚಿತ್ರದ ಬಳಿಕ ...

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಗುರುವಾರ(ಜೂನ್ 6)36ನೇ ಹುಟ್ಟುಹಬ್ಬದ ಸಂಭ್ರಮ. ಕಿರಿಕ್ ಪಾರ್ಟಿ ಚಿತ್ರದ ಬಳಿಕ ಅವರು ತೆರೆ ಮೇಲೆ ಬಂದಿರಲಿಲ್ಲ. ಇದೀಗ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ನಾಯಕನಟನಾಗಿ ತೆರೆಯ ಮೇಲೆ ಅವರ ಅಭಿಮಾನಿಗಳು ನೋಡುವ ಸಮಯ ಸನ್ನಿಹಿತವಾಗಿದೆ.

ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಅವನೇ ಶ್ರೀಮನ್ನಾರಾಯಣ ಚಿತ್ರದ ವಿಶೇಷ ಪೋಸ್ಟರ್, ಎರಡನೇ ಟೀಸರ್ ಬಿಡುಗಡೆಯಾಗುತ್ತಿದೆ.
ರಕ್ಷಿತ್ ಶೆಟ್ಟಿ ಮುಂದಿನ ಚಿತ್ರ ಅವನೇ ಶ್ರೀಮನ್ನಾರಾಯಣ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಿಗೆ ಡಬ್ ಆಗುತ್ತಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.
ಇದರ ಜೊತೆ ಒಂದು ವರ್ಷದಿಂದ ಸಾಮಾಜಿಕ ಜಾಲತಾಣದಿಂದ ದೂರವಾಗಿದ್ದ ರಕ್ಷಿತ್ ಶೆಟ್ಟಿ ಇಂದು ಮತ್ತೆ ವಾಪಸ್ಸಾಗಿದ್ದಾರೆ.ಆದರೆ ಖುದ್ದು ರಕ್ಷಿತ್ ಶೆಟ್ಟಿಯವರೇ ಸೋಷಿಯಲ್ ಮೀಡಿಯಾ ಖಾತೆಯನ್ನು ನಿರ್ವಹಿಸುತ್ತಿಲ್ಲ. ಇದಕ್ಕಾಗಿ ಅವರ ಡಿಜಿಟಲ್ ತಂಡವಿದೆ. ತಮ್ಮ ಡಿಜಿಟಲ್ ಟೀಮ್ ಮೂಲಕ ರಕ್ಷಿತ್ ಶೆಟ್ಟಿಯವರು ತಮ್ಮ ಮುಂಬರುವ ಚಿತ್ರಗಳು, ಅವರ ಕೆಲವು ಅನಿಸಿಕೆಗಳು, ಅಭಿಪ್ರಾಯಗಳನ್ನು ಕಾಲಕಾಲಕ್ಕೆ ಅಪ್ ಡೇಟ್ ಮಾಡುತ್ತಾ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲಿದ್ದಾರೆ.
ಸೋಷಿಯಲ್ ಮೀಡಿಯಾದಿಂದ ದೂರವಿದ್ದ ರಕ್ಷಿತ್ ಶೆಟ್ಟಿ:

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT