ಭರಾಟೆ ಚಿತ್ರೀಕರಣದ ವೇಳೆ ಶ್ರೀಮುರಳಿ ಮತ್ತು ನಿರ್ದೇಶಕ ಚೇತನ್ ಕುಮಾರ್ 
ಸಿನಿಮಾ ಸುದ್ದಿ

'ಭರಾಟೆ'ಯಲ್ಲಿ ಹಲವು ದೊಡ್ಡ ಕಲಾವಿದರ ಸಂಗಮವಿದೆ: ಶ್ರೀಮುರಳಿ

ಚೇತನ್ ಕುಮಾರ್ ನಿರ್ದೇಶನದ ಶ್ರೀಮುರಳಿಯವರ ಮುಂದಿನ ಚಿತ್ರ ಭರಾಟೆಯ ಸಂಭಾಷಣೆ ಭಾಗ ಮುಗಿದಿದೆ... ಇನ್ನು

ಚೇತನ್ ಕುಮಾರ್ ನಿರ್ದೇಶನದ ಶ್ರೀಮುರಳಿಯವರ ಮುಂದಿನ ಚಿತ್ರ ಭರಾಟೆಯ ಸಂಭಾಷಣೆ ಭಾಗ ಮುಗಿದಿದೆ. ಇನ್ನು ಎರಡು ಹಾಡಿನ ಶೂಟಿಂಗ್ ಬಾಕಿ ಇದ್ದು ಅದನ್ನು ಯುರೋಪ್ ನಲ್ಲಿ ಚಿತ್ರೀಕರಿಸಲು ಚಿತ್ರತಂಡ ನಿರ್ಧರಿಸಿದೆ. ಜುಲೈಯಲ್ಲಿ ಚಿತ್ರತಂಡ ಯುರೋಪ್ ಗೆ ಹೋಗಲಿದೆ. 
ಈ ಮಧ್ಯೆ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಮತ್ತು ಡಬ್ಬಿಂಗ್ ಕೆಲಸ ಒಟ್ಟೊಟ್ಟಿಗೆ ನಡೆಯಲಿದೆ. ಇದೊಂದು ಬಿಗ್ ಬಜೆಟ್ ಸಿನಿಮಾವಾಗಿದ್ದು ಸುಮಾರು 75 ಪ್ರಮುಖ ಕಲಾವಿದರು ಇದರಲ್ಲಿ ನಟಿಸಿದ್ದಾರೆ. ಇವರೆಲ್ಲರನ್ನು ದಿನಾಂಕಗಳಿಗೆ ಹೊಂದಿಸಿಕೊಂಡು ಡಬ್ಬಿಂಗ್ ಮಾಡಿಸುವುದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ನಿರ್ದೇಶಕ ಚೇತನ್ ಅವರನ್ನು ಹೊಗಳಲೇ ಬೇಕು. ಒಂದು ವೇದಿಕೆಯಲ್ಲಿ ಹಲವು ಕಲಾವಿದರನ್ನು ಒಟ್ಟಿಗೆ ನಿಭಾಯಿಸುವುದು ನಿಜಕ್ಕೂ ಸವಾಲು ಎನ್ನುತ್ತಾರೆ ಚೇತನ್.
ಚಿತ್ರ ಚೆನ್ನಾಗಿ ಮೂಡಿಬರಬೇಕೆಂದು ಶ್ರೀಮುರಳಿಯವರು ಸಣ್ಣ ಸಣ್ಣ ವಿಷಯಗಳ ಬಗ್ಗೆ ಕೂಡ ಗಮನ ಹರಿಸುತ್ತಾರಂತೆ. ಚಿತ್ರಕ್ಕೆ ಸುಪ್ರೀತ್ ಅವರ ನಿರ್ಮಾಣ ಮತ್ತು ಅರ್ಜುನ್ ಜನ್ಯ ಸಂಗೀತವಿದೆ.
ಶ್ರೀಲೀಲಾ ನಾಯಕಿಯಾದರೆ ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ ಶರ್ಮ, ಅವಿನಾಶ್, ಶರತ್ ಲೋಹಿತಾಶ್ವ, ರಾಜು ವಾಡೆ, ಮನಮೋಹನ್, ಉಗ್ರಂ ಮಂಜು ಮತ್ತು ದೀಪಕ್ ರಂತಹ ಪ್ರಮುಖ ಕಲಾವಿದರಿದ್ದಾರೆ. 
ಭರಾಟೆ ಗಣೇಶ ಚತುರ್ಥಿ ಸಂದರ್ಭದಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT