ಯುವರತ್ನ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಬಾಡಿ ಬಿಲ್ಡರ್ ಮಮತಾ ಸನತ್ ಕುಮಾರ್ 
ಸಿನಿಮಾ ಸುದ್ದಿ

'ಯುವರತ್ನ' ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಬಾಡಿ ಬಿಲ್ಡರ್ ಮಮತಾ ಸನತ್ ಕುಮಾರ್

ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ಅಭಿನಯದ "ಯುವರತ್ನ" ಚಿತ್ರೀಕರಣ ಮೈಸೂರಿನಲ್ಲಿ ಸಾಗಿದ್ದು "ಟಗರು" ಖ್ಯಾತಿಯ ತ್ರಿವೇಣಿ ರಾವ್ ಜತೆಗೆ ಕನ್ನಡದ ಮೊದಲ ಮಹಿಳಾ....

ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ಅಭಿನಯದ "ಯುವರತ್ನ" ಚಿತ್ರೀಕರಣ ಮೈಸೂರಿನಲ್ಲಿ ಸಾಗಿದ್ದು "ಟಗರು" ಖ್ಯಾತಿಯ ತ್ರಿವೇಣಿ ರಾವ್  ಜತೆಗೆ ಕನ್ನಡದ ಮೊದಲ ಮಹಿಳಾ ಬಾಡಿ ಬಿಲ್ಡರ್  ಮಮತಾ ಸನತ್ ಕುಮಾರ್ ಸಹ ಸೆಟ್ ನಲ್ಲಿದ್ದಾರೆ.
ತ್ರಿವೇಣಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ "ಯುವರತ್ನ" ಚಿತ್ರದಲ್ಲಿ ಅಪ್ಪು (ಪುನೀತ್ ರಾಜ್ ಕುಮಾರ್) ಜತೆಗೆ ಅಭಿನಯಿಸಲು ಕಾತುರಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಮಮತಾ ದಕ್ಷಿಣ ಭಾರತದ ಬಾಡಿ ಬಿಲ್ಡರ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ವಿಜೇತೆಯಾಗಿದ್ದಾರೆ. ಈಗ ಅವರು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.
ಇದೀಗ ಮಮತಾ "ಯುವರತ್ನ" ಮೂಲಕ ಸ್ಯಾಡಲ್ ವುಡ್ ಗೆ ಪ್ರವೇಶಿಸುತ್ತಿದ್ದು ಪುನೀತ್ ರಾಜ್ ಕುಮಾರ್ ಜತೆ ತೆರೆ ಹಂಚಿಕೊಳ್ಳುತ್ತೊಇದ್ದಾರೆ. ಪುನೀತ್ ಈ ಚಿತ್ರದಲ್ಲಿ ಕಾಲೇಜು ವಿದ್ಯಾರ್ಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ಸಧ್ಯ ತಮ್ಮ ಪಾತ್ರದ ಡೈಲಾಗ್ ಹಾಗೂ ನಟನೆಯ ಅಭ್ಯಾಸದಲ್ಲಿದ್ದಾರೆಂದು ಚಿತ್ರತಂಡದ ಮೂಲಗಳು ಹೇಳಿವೆ. ಆದ್ರೆ ನಿರ್ಮಾಪಕರು ಈ ಇಬ್ಬರು ನಟಿಯರ ಪಾತ್ರದ ಬಗೆಗೆ ಯಾವ ವಿವರವನ್ನೂ ನೀಡಿಲ್ಲ.
ಹಂಬಲ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ "ಯುವರತ್ನ" ಚಿತ್ರ ನಿರ್ದೇಶಕ ಸಂತೋಷ್ ಹಾಗೂ ಪುನೀತ್ ಜೋಡಿಯ ಎರಡನೇ ಚಿತ್ರವಾಗಿದೆ.ಇನ್ನು ಈ ಚಿತ್ರದಲ್ಲಿ ನವನಟಿ ಸಯ್ಯೇಶಾ ಅಭಿನಯಿಸುತ್ತಿದ್ದಾರೆ. ರಾಧಿಕಾ ಶರತ್ ಕುಮಾರ್ ಸಹ ಬಹು ದಿನಗಳ ಬಳಿಕ ಕನ್ನಡ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT