ಸಿನಿಮಾ ಸುದ್ದಿ

ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ನಟಿ ರಶ್ಮಿಕಾ ಮಂದಣ್ಣ ಮತ್ತಿತರರ ಬೆಂಬಲ

Nagaraja AB
ಬೆಂಗಳೂರು: ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಗೆ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಆಗ್ರಹಿಸಿ ಸಾಮಾಜಿಕ ಮಾಧ್ಯಮದಲ್ಲಿ  ಅಭಿಯಾನ ಆರಂಭವಾಗಿದೆ. ರಾಜಕೀಯ, ಮಾಧ್ಯಮ, ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಈ ಅಭಿಯಾನಕ್ಕೆ   ಕೈ ಜೋಡಿಸಿದ್ದಾರೆ.
ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಮತ್ತು ಕ್ರೇಜಿಸ್ಟಾರ್  ರವಿಚಂದ್ರನ್ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಬೆನ್ನಲ್ಲೇ  ಇದೀಗ ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರು ಈ ಅಭಿಯಾನದ ಬೆಂಬಲಕ್ಕೆ ನಿಂತಿದ್ದಾರೆ. ಕೊಡಗಿನ ನಟಿಯರಾದ ರಶ್ಮಿಕ ಮಂದಣ್ಣ ಹಾಗೂ ಹರ್ಷಿಕಾ ಪೂಣಚ್ಚ ಟ್ವೀಟ್ ಮಾಡಿದ್ದಾರೆ.
ಕೂರ್ಗಿನಲ್ಲಿ ಅತ್ಯುತ್ತುಮವಾದ ಆಸ್ಪತ್ರೆ ಇಲ್ಲ, ಇದಕ್ಕಾಗಿ ನಾವು ದೂರ ಪ್ರಯಾಣಿಸಬೇಕಾಗಿದೆ. ಕೊಡಗಿನಲ್ಲಿ ಆಸ್ಪತ್ರೆಗೆ ಇದ್ದರೆ ಜನರಿಗೆ ತುಂಬಾ ಸಹಾಯವಾಗುತ್ತದೆ. ದಯವಿಟ್ಟು ಸ್ಪಂದಿಸಿ ಎಂದು # we need Emergency Hospital in kodagu ಹ್ಯಾಷ್ ಟ್ಯಾಗ್ ಬಳಸಿ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದಾರೆ.


SCROLL FOR NEXT