ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಾಕಾರಿ ಹೇಳಿಕೆಗಳ ವಿರುದ್ಧ ಸಿಡಿದೆದ್ದಿರುವ ಕನ್ನಡದ ವಜ್ರಕಾಯದ ನಟಿ ಹಾಗೂ ಮಾಡೆಲ್ ಶುಭ್ರಾ ಅಯ್ಯಪ್ಪ ಸೈಬರ್ ಕ್ರೈಂ ಪೊಲೀಸರ ಹೋಗಿದ್ದಾರೆ. ಇನ್ಸಾಟಾ ಗ್ರಾಂನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗೆ ಶುಭ್ರ ಅಯ್ಯಪ್ಪ ಬಿಕನಿ ತೊಟ್ಟು ಬೀಚ್ ವೊಂದರಲ್ಲಿ ದೋಣಿ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕೆಲ ಕಿಡಿಗೇಡಿಗಳು ಈ ವಿಡಿಯೋ ಜೊತೆಗೆ ಆಕೆಯ ಕೆಲವು ಹಾಟ್ ಪೋಟೋ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕೆಟ್ಟದ್ದಾಗಿ ಕಮೆಂಟ್ ಮಾಡಿದ್ದರು.
ಅಭಿಮಾನದ ಹೆಸರಿನಲ್ಲಿ ಕಿಡಿಗೇಡಿಗಳು ಎಸಗಿದ ಈ ಕೃತ್ಯಕ್ಕೆ ಕೆಂಡಮಂಡಲರಾಗಿರುವ ಶುಭ್ರಾ ಅಯ್ಯಪ್ಪ, ತನ್ನ ವೈಯಕ್ತಿಕ ಜೀವನಕ್ಕೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆ ನೀಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಹೌದು ನಾನು ನಟಿ, ಹೌದು ನಾನು ಮಾಡೆಲ್ಸ ಸಾರ್ವಜನಿಕ ಜೀವನದಲ್ಲಿರುವಂತಹದ್ದನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಆದರೆ, ನಾನು ಸಾರ್ವಜನಿಕ ಸ್ವತ್ತಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos