ಸುದೀಪ್ 
ಸಿನಿಮಾ ಸುದ್ದಿ

ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ: ಮುಖ್ಯಮಂತ್ರಿಗೆ ಸುದೀಪ್ ಮನವಿ

ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.

ಬೆಂಗಳೂರು: ಪ್ರಾಕೃತಿಕ ವೈವಿಧ್ಯಮಯ ತಾಣವಾದ  ಉತ್ತರ ಕನ್ನಡ  ಹಾಗೂ ಕೊಡಗು ಜಿಲ್ಲೆಗಳಲ್ಲಿ  ಗಂಭೀರ ಸ್ವರೂಪದ ಕಾಯಿಲೆಗಳು ಹಾಗೂ ಅಪಘಾತಗಳ ಸಂದರ್ಭದಲ್ಲಿ ತಕ್ಷ ಣದ ಚಿಕಿತ್ಸೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂಬ ಆಗ್ರಹದ ಅಭಿಯಾನ ಇದೀಗ ಪ್ರಾರಂಭಗೊಂಡಿದೆ. 
ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರಂಭವಾಗಿರುವ ಈ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆಯನ್ನು ಪಡೆದುಕೊಳ್ಳುತ್ತಿದೆ. ನೆಟ್ಟಿಗರು ಫೇಸ್ ಬುಕ್, ಟ್ವಿಟರ್, ವಾಟ್ಸಾಪ್ ಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ.
ಈ ಅಭಿಯಾನಕ್ಕೆ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, ರವಿಚಂದ್ರನ್ , ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ , ಹರ್ಷಿಕಾ ಪೂಣಚ್ಚ ಹೀಗೆ ಹಲವಾರು ಸ್ಯಾಂಡಲ್ ವುಡಿನ ನಟ, ನಟಿಯರು ಬೆಂಬಲ ವ್ಯಕ್ತಪಡಿಸಿದ್ದರು. 
ಇದೀಗ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಕೂಡಾ ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, ಕೊಡಗು,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT