ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅದ್ಯಕ್ಷರಾಗಿ ಜೈರಾಜ್ ಆಯ್ಕೆ!

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಜೈರಾಜ್ ಡಿಆರ್ ಅವಿರೋಧ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಜೈರಾಜ್ ಡಿಆರ್ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಉಮೇಶ್ ಬಣಕಾರ್, ವಿತರಕ ವಲಯದಿಂದ ನಾಗರಾಜ್ ಬಿ.ಎಲ್.(ನಾಗಣ್ಣ) ಮತ್ತು ಪ್ರದರ್ಶಕ ವಲಯದಿಂದ ವೆಂಕಟರಮಣ(ಬಾಜ್ಜಿ) ಆಯ್ಕೆಯಾಗಿದ್ದು, ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಸುರೇಶ್ ಎನ್ಎಂ, ವಿತರಕ ವಲಯದಿಂದ ಗಣೇಶ್ ಎ ಮತ್ತು ಪ್ರದರ್ಶಕ ವಲಯದಿಂದ ನರಸಿಂಹಲು ಎಂ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ವೆಂಕಟೇಶ್ ಕೆ.ವಿ. ಆಯ್ಕೆಯಾಗಿದ್ದಾರೆ.
ಈ ಬಾರಿ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ‌‌‌ ಮೀಸಲಾಗಿತ್ತು. ಮಂಗಳವಾರ ಮಂಡಳಿಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಗುಬ್ಬಿಯ ಶ್ರೀಚನ್ನಬಸವೇಶ್ವರ ಟಾಕೀಸ್ ಮಾಲೀಕರಾದ ಜೈರಾಜ್ ಅವರನ್ನು ಹೊರತುಪಡಿಸಿದರೆ ಯಾರೊಬ್ಬರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಭಾನುವಾರ ಬೆಳಿಗ್ಗೆ 11ಗಂಟೆಗೆ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!