ರಾಧಿಕಾ ಕುಮಾರಸ್ವಾಮಿ 
ಸಿನಿಮಾ ಸುದ್ದಿ

ಆರೋಗ್ಯ ಚೇತರಿಕೆ, ಮಾ.5ರಿಂದ 'ದಮಯಂತಿ' ಸೆಟ್ ಗೆ ರಾಧಿಕಾ ಪುನರಾಗಮನ

ಶಾಂತಿನಗರ ಸ್ಮಶಾನದಲ್ಲಿ "ಭೈರಾದೇವಿ" ಶೂಟಿಂಗ್ ವೇಳೆ ಗಾಯಗೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಇದೀಗ ಚೇತರಿಸಿಕೊಂಡಿದ್ದು ಮಾರ್ಚ್ 5ರಿಂದ "ದಮಯಂತಿ" ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಶಾಂತಿನಗರ ಸ್ಮಶಾನದಲ್ಲಿ "ಭೈರಾದೇವಿ" ಶೂಟಿಂಗ್ ವೇಳೆ ಗಾಯಗೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಇದೀಗ ಚೇತರಿಸಿಕೊಂಡಿದ್ದು ಮಾರ್ಚ್ 5ರಿಂದ "ದಮಯಂತಿ" ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
ಕೆಲ ದಿನಗಳ ಕಾಲ ವಿಶ್ರಾಂತಿಯ ಬಳಿಕ ನಟಿ ಮತ್ತೆ ಎರಡು ಚಿತ್ರಗಳ ಶೂಟಿಂಗ್ ಗಳಲ್ಲಿ ತೊಡಗಿಸಿಕೊಳ್ಲಲು ಬಯಸಿದ್ದಾರೆ. "ನನ್ನ ಆರೋಗ್ಯ ಈಗ ಉತ್ತಮವಾಗಿದೆ. ಇದೀಗ ನಾನು ದಮಯಂತಿ ಚಿತ್ರದ ವಾರದ ಕಾಲದ ಶುಟಿಂಗ್ ನಲ್ಲಿ ತೊಡಗಿಸಿಕೊಳ್ಲಲು ನಿರ್ಧರಿಸಿದ್ದೇನೆ.ಇದೇ ವೇಳೆ ಭೈರಾದೇವಿಯಲ್ಲಿ ನನಗೆ ಮೂರು ದಿನಗಳ ಕೆಲಸ ಹಾಗೂ ಎರಡು ಹಾಡುಗಳ ಚಿತ್ರೀಕರಣಬಾಕಿ ಇದೆ.ಇದನ್ನು ನಾನು ಮಾರ್ಚ್ 17ರ ನಂತರ ಪೂರ್ಣಗೊಳಿಸುತ್ತೇನೆ" ರಾಧಿಕಾ ಹೇಳಿದ್ದಾರೆ.
ರಾಧಿಕಾ ಅವರ ಸ್ವಂತ ನಿರ್ಮಾಣದಲ್ಲಿ ಮೂಡಿಬರುತ್ತಿರುವ "ಭೈರಾದೇವಿ" ಚಿತ್ರಕ್ಕೆ ಶ್ರೀಜೈ ಆಕ್ಷನ್ ಕಟ್ ಹೇಳಿದ್ದಾರೆ. ಇದು ಥ್ರಿಲ್ಲರ್ ಕಥಾನಕವಾಗಿದು ಅನುಭವಿ ನಟ ರಮೇಶ್ ಅರವಿಂದ್ ಈ ಚಿತ್ರದಲ್ಲಿ ಪೋಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ.
ಇನ್ನು ನವರಸನ್ ನಿರ್ದೇಶನದ "ದಮಯಂತಿ" ಎಂಬತ್ತರ ದಶಕದ ಕಥಾನಕವಾಗಿದ್ದು ಇದರಲ್ಲಿ ಸಹ ರಾಧಿಕಾ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT