ನಟಸಾರ್ವಭೌಮ 
ಸಿನಿಮಾ ಸುದ್ದಿ

25 ದಿನ ಪೂರೈಸಿದ 'ನಟಸಾರ್ವಭೌಮ', ಚಿತ್ರತಂಡದಿಂದ ರಾಜ್ಯಾದ್ಯಂತ ಸಕ್ಸಸ್ ಟೂರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯದ "ನಟಸಾರ್ವಭೌಮ" ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಚೆನ್ನಾಗಿ ಸದ್ದು ಮಾಡುತ್ತಿದೆ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಇದೀಗ 200 ಕ್ಕೂ ಹೆಚ್ಚಿನ ಕೇಂದ್ರ.....

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯದ "ನಟಸಾರ್ವಭೌಮ" ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಚೆನ್ನಾಗಿ ಸದ್ದು ಮಾಡುತ್ತಿದೆ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಇದೀಗ 200 ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ 25 ದಿನಗಳನ್ನು ಪೂರ್ಣಗೊಳಿಸಿದೆ.  ಈ ಸಂತಸದ ಕ್ಷಣದಲ್ಲಿ ಚಿತ್ರತಂಡ ಭಾನುವಾರವು ಚಿತ್ರದ ಯಶಸ್ಸಿನ ಕಾರಣ ಸಕ್ಸಸ್ ಟೂರ್ ಹಮ್ಮಿಕೊಂಡಿದೆ.
ಹಾವೇರಿ, ದಾವಣಗೆರೆ, ಚಿತ್ರದುರ್ಗ, ರಾಣಿಬೆನ್ನೂರು, ಹಿರಿಯೂರು, ಶಿರಾ, ತುಮಕೂರು ಸೇರಿದಂತೆ ಕರ್ನಾಟಕದ ನಾನಾ ಕಡೆ "ನಟಸಾರ್ವಭೌಮ" ಚಿತ್ರತಂಡದ ಸದಸ್ಯರು ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯ ಧಾರವಾಡದಲ್ಲಿ "ಯುವರತ್ನ" ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಪುನೀತ್ ಭಾನುವಾರ ತಮ್ಮ ಅಭಿಮಾನಿಗಳನ್ನು ಭೇಟಿಯಾಗಿ "ನಟಸಾರ್ವಭೌಮ" ಚಿತ್ರದ ಯಶಸ್ಸಿನ ಸಂತಸವನ್ನು ಹಂಚಿಕೊಳ್ಳುತ್ತಾರೆ.
ರೋಚಕ ಕಥಾನಕದ ಚಿತ್ರದಲ್ಲಿ ನಟ ಪುನೀತ್ ಫೋಟೋಗ್ರಾಫರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ರಚಿತಾ ರಾಮ್, ಅನುಪಮಾ ಪರಮೇಶ್ವರನ್, ರವಿಶಂಕರ್ ಹಾಗು ಚಿಕ್ಕಣ್ಣ ಸೇರಿ ಮಹತ್ವದ ನಟ ನಟಿಯರು ತೆರೆ ಹಂಚಿಕೊಂಡಿದ್ದಾರೆ.ಮದ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಚಿತ್ರ ಯಶಸ್ವಿಯಾಗಿ ನಾಲ್ಕನೇ ವಾರದ ಪ್ರದರ್ಶನ ಕಾಣುತ್ತಿದ್ದು ಆಸ್ಟ್ರೇಲಿಯಾ ಹಾಗು ಜರ್ಮನಿಗಳಲ್ಲಿ ಸಹ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT