ಕುರುಕ್ಷೇತ್ರ 
ಸಿನಿಮಾ ಸುದ್ದಿ

ಮಂಡ್ಯ ಲೋಕಸಭೆ ಕಣಕ್ಕೆ ನಿಖಿಲ್ ಕುಮಾರಸ್ವಾಮಿ: ಬಹುನಿರೀಕ್ಷಿತ 'ಕುರುಕ್ಷೇತ್ರ' ಚಿತ್ರ ಬಿಡುಗಡೆ ವಿಳಂಬ?

ಮಂಡ್ಯ ಲೋಕ್ಸಭೆ ಕಣದಲ್ಲಿ ಮುಖ್ಯಮಂತ್ರಿ ಎಚ್.ಡಿ.. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾತ್ರಸ್ವಾಮಿ ಸ್ಪರ್ಧಿಸುತ್ತಿರುವುದು ಖಚಿತವಾಗುತ್ತಿದ್ದಂತೆ ನಿಖಿಲ್ ಅಭಿನಯಿಸಿರುವ ....

ಬೆಂಗಳೂರು: ಮಂಡ್ಯ ಲೋಕ್ಸಭೆ ಕಣದಲ್ಲಿ ಮುಖ್ಯಮಂತ್ರಿ ಎಚ್.ಡಿ.. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾತ್ರಸ್ವಾಮಿ ಸ್ಪರ್ಧಿಸುತ್ತಿರುವುದು ಖಚಿತವಾಗುತ್ತಿದ್ದಂತೆ ನಿಖಿಲ್ ಅಭಿನಯಿಸಿರುವ ನಾಗಣ್ಣ ನಿರ್ದೇಶನದ ಬಹುಕೋಟಿ ವೆಚ್ಚದ ಚಿತ್ರ "ಕುರುಕ್ಷೇತ್ರ" ಬಿಡುಗಡೆ ಮತ್ತೆ ವಿಳಂಬವಾಗುತ್ತದೆಂಬ ಮಾತು ಕೇಳಿಬರುತ್ತಿದೆ.
ನಿಖಿಲ್ ಕುಮಾರಸ್ವಾಮಿ ಇದಾಗಲೇ "ಜಾಗ್ವಾರ್", "ಸೀತಾರಾಮ ಕಲ್ಯಾಣ" ಚಿತ್ರಗಳಲ್ಲಿ ನಟಿಸಿದ್ದು "ಕುರುಕ್ಷೇತ್ರ" ಅವರ ಮೂರನೇ ಚಿತ್ರವಾಗಿದೆ. ಮುನಿರತ್ನ ನಿರ್ಮಾಣ, ನಾಗಣ್ಣ ಆಕ್ಷನ್ ಕಟ್ ಹೇಳಿದ ಈ ಚಿತ್ರದಲ್ಲಿ ನಿಖಿಲ್ ಅಭಿಮನ್ಯುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಇದರಲ್ಲಿ ಅಭಿನಯಿಒಸುತ್ತಿದ್ದಾರೆ. 
ಚಿತ್ರದ ಗ್ರಾಫಿಕ್ಸ್ ಕೆಲಸ ಪ್ರಗತಿಯಲ್ಲಿದೆ. ಕೆಲ ಹಂತಗಳಲ್ಲಿ ಗ್ರಾಫಿಕ್ಸ್ ಕೆಲಸ ವಿಳಂಬವಾಗಿರುವುದು ಚಿತ್ರ ಬಿಡುಗಡೆ ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ ಇದೀಗ ಲೋಕಸಭೆ ಚುನಾವಣೆಗೆ ನಿಖಿಲ್ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಚಿತ್ರ ಬಿಡುಗಡೆ ಇನ್ನಷ್ಟು ವಿಳಂಬ ಆಗಲಿದೆ ಎಂದೂ ಹೇಳಆಗುತ್ತಿದೆ. ಒಂದು ವೇಳೆ ನೀತಿ ಸಂಹಿತೆ ಜಾರಿಯಾದದ್ದೇ ಆದರೆ ಬಹುನಿರೀಕ್ಷಿತ ಚಿತ್ರ "ಕುರುಕ್ಷೇತ್ರ" ಲೋಕಸಭೆ ಚುನಾವಣೆ ಮುಗಿದ ಬಳಿಕವೇ ತೆರೆ ಕಾಣಬೇಕಾಗುವ ಸಂಭವವೂ ಇದೆ ಎನ್ನಲಾಗಿದೆ.
ಆದರೆ ಈ ಸಂಬಂಧ ಚಿತ್ರತಂಡ, ನಿರ್ಮಾಪಕರಾಗಲಿ ಇದುವರೆಗೆ ಅಧಿಕೃತ ಹೇಳಿಕೆನೀಡಿಲ್ಲ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT