ರಾಜ್ ಬಿ ಶೆಟ್ಟಿ 
ಸಿನಿಮಾ ಸುದ್ದಿ

ರಾಜ್ ಬಿ ಶೆಟ್ಟಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ಇಬ್ಬರು ಹೀರೋಗಳು

ಒಂದು ಮೊಟ್ಟೆಯ ಕಥೆ ' ಚೊಚ್ಚಲ ಚಿತ್ರ ನಿರ್ದೇಶನ ಹಾಗೂ ನಟನಾ ಕೌಶಲ್ಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಪ್ರಸಿದ್ಧಿಗೆ ಬಂದ ರಾಜ್ ಬಿ ಶೆಟ್ಟಿ ಇದೀಗ 'ಹರಿಹರ ಎಂಬ ಶೀರ್ಷಿಕೆಯನ್ನಿಟ್ಟುಕೊಂಡು ಮುಂದಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬೆಂಗಳೂರು:'ಒಂದು ಮೊಟ್ಟೆಯ ಕಥೆ ' ಚೊಚ್ಚಲ ಚಿತ್ರ ನಿರ್ದೇಶನ ಹಾಗೂ ನಟನಾ ಕೌಶಲ್ಯದ ಮೂಲಕ ಕನ್ನಡ  ಚಿತ್ರರಂಗದಲ್ಲಿ ಹೆಚ್ಚು ಪ್ರಸಿದ್ಧಿಗೆ ಬಂದ ರಾಜ್ ಬಿ ಶೆಟ್ಟಿ ಇದೀಗ  'ಹರಿಹರ ಎಂಬ ಶೀರ್ಷಿಕೆಯನ್ನಿಟ್ಟುಕೊಂಡು ಮುಂದಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಸಿಟಿ ಎಕ್ಸ್ ಪ್ರೆಸ್ ಗೆ ಈ ವಿಷಯ ತಿಳಿಸಿರುವ ರಾಜ್, ಈ ಚಿತ್ರದಲ್ಲಿ ಇಬ್ಬರು ಹಿರೋಗಳು ಇರಲಿದ್ದಾರೆ. ತಾನೇ ಹಿರೋ ಆಗಿದ್ದು, ಮತ್ತೊಬ್ಬರನ್ನು ಸದ್ಯದಲ್ಲಿಯೇ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

  ಪ್ರಸ್ತುತ ಗಾಂಧಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಕಥೆ ಸಿದ್ದವಾಗಿದೆ. ಮೇ ಮಧ್ಯಭಾಗದಿಂದ ಚಿತ್ರೀಕರಣ ಆರಂಭಿಸಲಾಗುವುದು. ಮತ್ತೊಬ್ಬ ಹೀರೋವನ್ನು  ಅಂತಿಮಗೊಳಿಸಿದ ನಂತರ ನನ್ನ ಭಾಗವನ್ನು ಆರಂಭಿಸುತ್ತೇನೆ. ಈಗ ಲೋಕೇಷನ್ ಅಂತಿಮಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬ್ರಹ್ಮ ಮತ್ತು ವಿಷ್ಣು ನಡುವಿನ ಪ್ರತಿಷ್ಠೆಯ  ಸಂಘರ್ಷ ವರ್ಣಿಸುವ ಯಕ್ಷಗಾನ ನಾಟಕ ಶ್ರೀ ದೇವಿ ಮಹಾತ್ಮೆ  ಸೀಕ್ವೆನ್ಸ್  ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಅದನ್ನು ಸಮಕಾಲಕ್ಕೆ ಹೊಂದಿಕೊಳ್ಳುವಂತೆ ಪುನರ್ ರಚಿಲಾಗಿದೆ.
ಮಾನವರಂತೆ ದೇವಮಾನವರಲ್ಲಿಯೂ ಪ್ರತಿಷ್ಠೆಕಾಗಿ ನಡೆಯುವ ಕಾದಾಟದಂತೆ ಇಬ್ಬರು ನಾಯಕರ ನಡುವಿನ ಸಂಘರ್ಷ ಚಿತ್ರದಲ್ಲಿ ಸಾಗಲಿದೆ. ಇಂದಿನ ಪ್ರೇಕ್ಷಕರಿಗೆ ಅದು ಇಷ್ಟವಾಗಲಿದೆ ಎಂಬ ನಂಬಿಕೆ ಹೊಂದಿರುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT