ಸುಮನ್ 
ಸಿನಿಮಾ ಸುದ್ದಿ

ಹುತಾತ್ಮ ಯೋಧರ ಕುಟುಂಬಕ್ಕೆ ಬರೋಬ್ಬರಿ 175 ಎಕರೆ ಜಮೀನು ದಾನ ನೀಡಿದ ಕನ್ನಡ ನಟ ಸುಮನ್!

ಹುತಾತ್ಮ ಯೋಧರ ಕುಟುಂಬಕ್ಕೆ ಹಲವರು ಅನೇಕ ರೀತಿಯಲ್ಲಿ ನೆರವಿಗೆ ಬರುತ್ತಿದ್ದಾರೆ. ಇನ್ನು ಮಂಗಳೂರು ಮೂಲದ ಕನ್ನಡ ನಟ ಸುಮನ್ ಅವರು ಹುತಾತ್ಮ...

ಬೆಂಗಳೂರು: ಹುತಾತ್ಮ ಯೋಧರ ಕುಟುಂಬಕ್ಕೆ ಹಲವರು ಅನೇಕ ರೀತಿಯಲ್ಲಿ ನೆರವಿಗೆ ಬರುತ್ತಿದ್ದಾರೆ. ಇನ್ನು ಮಂಗಳೂರು ಮೂಲದ ಕನ್ನಡ ನಟ ಸುಮನ್ ಅವರು ಹುತಾತ್ಮ ಯೋಧರ ಕುಟುಂಬಕ್ಕೆ ಬರೋಬ್ಬರಿ 175 ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ.
ಕನ್ನಡ, ತಮಿಳು ಮತ್ತು ತೆಲುಗಿನಲ್ಲಿ ಸಾಕಷ್ಟು ಹೆಸರು ಮಾಡಿರುವ ಸುಮನ್ ಅವರು ಈ ಬಗ್ಗೆ ಹೇಳಿದ್ದು ನಾನು ಚಿತ್ರರಂಗಕ್ಕೆ ಬಂದು ಬಹಳ ವರ್ಷಗಳಾಗಿವೆ. ಆದರೆ ಸಮಾಜಕ್ಕೆ ಅನು ಮಾಡಿದ್ದೇನೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಆಗ ನನ್ನ ಪತ್ನಿ ಸಲಹೆ ನೀಡಿದರು. ಹೈದರಾಬಾದ್ ನಗರದಿಂದ ಹೊರವಲಯದಲ್ಲಿ ಸ್ಟುಡಿಯೋ ಮಾಡಬೇಕು ಎಂದು ತೆಗೆದುಕೊಂಡ 175 ಎಕರೆ ಜಾಗ ಇದೆ. ಅದನ್ನು ಕಾರ್ಗಿಲ್ ವಾರ್ ಹೀರೋಸ್ ನೀಡೋಣ ಅಂದರು ಅದು ನನಗೂ ಸರಿ ಅಂತ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದರು.
ಆ ಜಾಗವನ್ನು ಸಮತಟ್ಟು ಮಾಡಿ ನಾವು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುತ್ತೇವೆ. ಅವರು ಮನೆ ಕಟ್ಟಿಕೊಳ್ಳಬಹುದು. ಈ ಜಾಗ ಹೈದರಾಬಾದಿಂದ ಸುಮಾರು 30 ಕಿ.ಮೀ ದೂರದಲ್ಲಿದೆ. ಯಾದಗಿರಿ ಗುಟ್ಟ ಎಂಬ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ ಇದೆ. ಈ ಜಾಗ ಸ್ವಲ್ಪ ಗುಡ್ಡಗಳಿಂದ ಕೂಡಿದೆ. ಈ ವರ್ಷಾಂತ್ಯಕ್ಕೆ ಅದನ್ನು ಸಮತಟ್ಟಾಗಿ ಮಾಡುತ್ತೇವೆ. ಮೊದಲು ಕಾರ್ಗಿಲ್ ಯೋಧರ ಕುಟುಂಬಕ್ಕೆ ನೀಡುತ್ತಿದ್ದೇವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT