ಸುಮನ್ 
ಸಿನಿಮಾ ಸುದ್ದಿ

ಹುತಾತ್ಮ ಯೋಧರ ಕುಟುಂಬಕ್ಕೆ ಬರೋಬ್ಬರಿ 175 ಎಕರೆ ಜಮೀನು ದಾನ ನೀಡಿದ ಕನ್ನಡ ನಟ ಸುಮನ್!

ಹುತಾತ್ಮ ಯೋಧರ ಕುಟುಂಬಕ್ಕೆ ಹಲವರು ಅನೇಕ ರೀತಿಯಲ್ಲಿ ನೆರವಿಗೆ ಬರುತ್ತಿದ್ದಾರೆ. ಇನ್ನು ಮಂಗಳೂರು ಮೂಲದ ಕನ್ನಡ ನಟ ಸುಮನ್ ಅವರು ಹುತಾತ್ಮ...

ಬೆಂಗಳೂರು: ಹುತಾತ್ಮ ಯೋಧರ ಕುಟುಂಬಕ್ಕೆ ಹಲವರು ಅನೇಕ ರೀತಿಯಲ್ಲಿ ನೆರವಿಗೆ ಬರುತ್ತಿದ್ದಾರೆ. ಇನ್ನು ಮಂಗಳೂರು ಮೂಲದ ಕನ್ನಡ ನಟ ಸುಮನ್ ಅವರು ಹುತಾತ್ಮ ಯೋಧರ ಕುಟುಂಬಕ್ಕೆ ಬರೋಬ್ಬರಿ 175 ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ.
ಕನ್ನಡ, ತಮಿಳು ಮತ್ತು ತೆಲುಗಿನಲ್ಲಿ ಸಾಕಷ್ಟು ಹೆಸರು ಮಾಡಿರುವ ಸುಮನ್ ಅವರು ಈ ಬಗ್ಗೆ ಹೇಳಿದ್ದು ನಾನು ಚಿತ್ರರಂಗಕ್ಕೆ ಬಂದು ಬಹಳ ವರ್ಷಗಳಾಗಿವೆ. ಆದರೆ ಸಮಾಜಕ್ಕೆ ಅನು ಮಾಡಿದ್ದೇನೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಆಗ ನನ್ನ ಪತ್ನಿ ಸಲಹೆ ನೀಡಿದರು. ಹೈದರಾಬಾದ್ ನಗರದಿಂದ ಹೊರವಲಯದಲ್ಲಿ ಸ್ಟುಡಿಯೋ ಮಾಡಬೇಕು ಎಂದು ತೆಗೆದುಕೊಂಡ 175 ಎಕರೆ ಜಾಗ ಇದೆ. ಅದನ್ನು ಕಾರ್ಗಿಲ್ ವಾರ್ ಹೀರೋಸ್ ನೀಡೋಣ ಅಂದರು ಅದು ನನಗೂ ಸರಿ ಅಂತ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದರು.
ಆ ಜಾಗವನ್ನು ಸಮತಟ್ಟು ಮಾಡಿ ನಾವು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುತ್ತೇವೆ. ಅವರು ಮನೆ ಕಟ್ಟಿಕೊಳ್ಳಬಹುದು. ಈ ಜಾಗ ಹೈದರಾಬಾದಿಂದ ಸುಮಾರು 30 ಕಿ.ಮೀ ದೂರದಲ್ಲಿದೆ. ಯಾದಗಿರಿ ಗುಟ್ಟ ಎಂಬ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ ಇದೆ. ಈ ಜಾಗ ಸ್ವಲ್ಪ ಗುಡ್ಡಗಳಿಂದ ಕೂಡಿದೆ. ಈ ವರ್ಷಾಂತ್ಯಕ್ಕೆ ಅದನ್ನು ಸಮತಟ್ಟಾಗಿ ಮಾಡುತ್ತೇವೆ. ಮೊದಲು ಕಾರ್ಗಿಲ್ ಯೋಧರ ಕುಟುಂಬಕ್ಕೆ ನೀಡುತ್ತಿದ್ದೇವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

‘ಪ್ರಜಾಪ್ರಭುತ್ವದ ಕರಾಳ ದಿನ’, 'ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ'; ಮಮತಾ ಬ್ಯಾನರ್ಜಿ ಕೆಂಡಾಮಂಡಲ

ನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರ ಉಡುಗೊರೆ ಯೋಜನೆ: ಸೆ. 28 ರಂದು ಸಿಎಂ ವಿಜಯ್ ಅಧಿಕೃತವಾಗಿ ಚಾಲನೆ!

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ! Video