ರವಿಚಂದ್ರನ್ 
ಸಿನಿಮಾ ಸುದ್ದಿ

'ದಶರಥ'ನಿಗೆ ಕರಿ ಕೋಟಿನ ಕಂಟಕ

ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರು ಬಹಳ ವರ್ಷಗಳ ನಂತರ ಲಾಯರ್ ಆಗಿ ಕಾಣಿಸಿಕೊಂಡಿರುವ 'ದಶರಥ' ಚಿತ್ರದ ನಿರ್ಮಾಪಕರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ.

ಬೆಂಗಳೂರು: ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರು ಬಹಳ ವರ್ಷಗಳ ನಂತರ ಲಾಯರ್ ಆಗಿ ಕಾಣಿಸಿಕೊಂಡಿರುವ 'ದಶರಥ' ಚಿತ್ರದ ನಿರ್ಮಾಪಕರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ.
ದಶರಥ ಚಿತ್ರದ ಎರಡನೇಯ ಹಾಡಿನಲ್ಲಿ ಕರಿ ಕೋಟ್ ಹಾಕೋರೆಲ್ಲಾ ಕೇಸ್ ಗೆಲ್ಲೋದಿಲ್ಲ.... ಗೆದ್ದು ಬಿಗೋರೆಲ್ಲಾ ಹರಿಶ್ಚಂದ್ರರಲ್ಲ ಎಂಬ ಸಾಲಿಗೆ ಇಬ್ಬರು ವಕೀಲರಾದ ಗಾದಿ ಲಿಂಗಪ್ಪ ಮತ್ತು ಪರುಶುರಾಮ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಕರಿಕೋಟು ಹಾಕೋರೆಲ್ಲ ಕೇಸು ಗೆಲ್ಲೋದಿಲ್ಲ’ ಎಂಬ ಹಾಡನ್ನು ಚಿತ್ರದಿಂದ ತೆಗೆದುಹಾಕಲು ನಿರ್ದೇಶನ ನೀಡಬೇಕೆಂದು ವಕೀಲರಾದ ಗಾದಿಲಿಂಗಪ್ಪ ಅರ್ಜಿ ಸಲ್ಲಿಸಿದ್ದಾರೆ.
ದಶರಥ ಚಿತ್ರ ಏಪ್ರಿಲ್ 5ರಂದು ತೆರೆ ಕಾಣುತ್ತಿದ್ದು, ಚಿತ್ರ ಬಿಡುಗಡೆಗೂ ಮುನ್ನ ವಿವಾದ ಇತ್ಯರ್ಥಪಡಿಸಲು ನಾವು ಮಾರ್ಚ್ 22ರಂದು ಪ್ರಯತ್ನಿಸುತ್ತಿದ್ದೇವೆ ಎಂದು ಚಿತ್ರದ ನಿರ್ದೇಶಕ ಎಂಎಸ್ ರಮೇಶ್ ಅವರು ಹೇಳಿದ್ದಾರೆ.
ಕರಿಕೋಟು ಹಾಕೋರೆಲ್ಲ ಕೇಸು ಗೆಲ್ಲೋದಿಲ್ಲ.... ಸಾಲು ತೆಗೆಯಲು ನಿರ್ದೇಶಕರು ಸಿದ್ಧರಿಲ್ಲ. ಆದರೆ ಈ ಹಾಡಿನಲ್ಲಿ ನ್ಯಾಯಾಲಯಗಳ ಘನತೆಗೆ ಧಕ್ಕೆಯಾಗುವ ಪದ ಬಳಸಲಾಗಿದೆ ಎಂದು ವಕೀಲರು ವಾದಿಸುತ್ತಿದ್ದಾರೆ.
ವಿ. ಮನೋಹರ್ ಅವರು ಬರೆದಿರುವ ಈ ಹಾಡನ್ನು ಗುರುಕಿರಣ್, ಪೀಚಳ್ಳಿ ಶ್ರೀನಿವಾಸ್ ಮತ್ತು ದೊಡ್ಡಪ್ಪ ಹಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT