ನಿತ್ಯಾ ಮೆನನ್ 
ಸಿನಿಮಾ ಸುದ್ದಿ

ನಿತ್ಯಾ ಮೆನನ್‌ಗೆ ಚಿತ್ರರಂಗದಿಂದ ಬಹಿಷ್ಕಾರದ ಬೆದರಿಕೆ, ಅಸಲಿಗೆ ನಿತ್ಯಾ ಮಾಡಿದ್ದೇನು?

ದಕ್ಷಿಣ ಭಾರತದ ನಟಿ ನಿತ್ಯಾ ಮೆನನ್‌ಗೆ ನಿರ್ಮಾಪಕರು ಚಿತ್ರರಂಗದಿಂದ ಬಹಿಷ್ಕಾರ ಹಾಕುವ ಬೆದರಿಕೆ ಹಾಕಿದ್ದು ಅಸಲಿಗೆ ನಿತ್ಯಾ ಮಾಡಿದ ತಪ್ಪೇನು ಇಲ್ಲಿದೆ ಮಾಹಿತಿ.

ದಕ್ಷಿಣ ಭಾರತದ ನಟಿ ನಿತ್ಯಾ ಮೆನನ್‌ಗೆ ನಿರ್ಮಾಪಕರು ಚಿತ್ರರಂಗದಿಂದ ಬಹಿಷ್ಕಾರ ಹಾಕುವ ಬೆದರಿಕೆ ಹಾಕಿದ್ದು ಅಸಲಿಗೆ ನಿತ್ಯಾ ಮಾಡಿದ ತಪ್ಪೇನು ಇಲ್ಲಿದೆ ಮಾಹಿತಿ.
ನಿತ್ಯಾ ಮೆನನ್ ಕೆಲ ದಿನಗಳಿಂದ ಕಾಂಟ್ರವರ್ಸಿಯೊಂದರಲ್ಲಿ ಸಿಲುಕಿದ್ದಾರೆ. ನಿರ್ಮಾಪಕರನ್ನು ಭೇಟಿಯಾಗುತ್ತಿಲ್ಲ. ಈಕೆಗೆ ಚಿತ್ರರಂಗದ ಮೇಲೆ ಆಸಕ್ತಿ ಕಡಿಮೆ ಆಗಿದೆ. ಅವರು ಭಂಜದ ಕೋಳಿಯಂತಾಗಿದ್ದಾರೆ. ಗರ್ವದಿಂದ ವರ್ತಿಸುತ್ತಿದ್ದಾರೆ ಎಂದು ಮಲಯಾಳಂನ ನಿರ್ಮಾಪಕರು ಆರೋಪಿಸುತ್ತಿದ್ದಾರೆ. 
ನಿತ್ಯಾ ನಡೆ ನಮಗೆ ಕೋಪ ತರಿಸಿದ್ದು ಆಕೆಯನ್ನು ಚಿತ್ರರಂಗದಿಂದ ನಿಷೇಧಿಸುತ್ತೇವೆ ಎಂದು ನಿರ್ಮಾಪಕರು ಎಚ್ಚರಿಕೆ ಕೊಟ್ಟಿದ್ದಾರೆ. ಥಟ್ಸಾಯಂ ಒರು ಪೆನ್ಕುಟ್ಟಿ ಚಿತ್ರದ ಶೂಟಿಂಗ್ ವೇಳೆ ನಿತ್ಯಾ ಭೇಟಿಗೆ ಒಂದಿಷ್ಟು ನಿರ್ಮಾಪಕರು ಬಂದಿದ್ದರು. ಆಗ ಅವರ ಭೇಟಿಗೆ ನಿತ್ಯಾ ಮುಂದಾಗಿರಲಿಲ್ಲ. ಇದಕ್ಕೆ ಆಕ್ರೋಶಗೊಂಡ ನಿರ್ಮಾಪಕರು ಆಕೆಯನ್ನು ಚಿತ್ರರಂಗದಿಂದ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ನಿತ್ಯಾ ನನ್ನ ತಾಯಿ ಮೂರನೇ ಹಂತದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಇದರಿಂದ ಧೃತಿಗೆಟ್ಟಿರುವ ನಾನು, ಈ ನೋವನ್ನು ನುಂಗಿಕೊಂಡೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಶೂಟಿಂಗ್ ಮುಗಿದ ಮೇಲೆ ನಾನು ಕ್ಯಾರಾವ್ಯಾನ್ ನಲ್ಲಿ ಒಬ್ಬಳೇ ಕುಳಿತು ಅಳುತ್ತಿದ್ದೇನೆ. ನನ್ನ ನೋವು ನನಗೆ ಗೊತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT