ಮಾಸ್ಟರ್ ಹಿರಣ್ಣಯ್ಯ 
ಸಿನಿಮಾ ಸುದ್ದಿ

ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನ

ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.

ಬೆಂಗಳೂರು: ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ  ಕೊನೆಯುಸಿರುಳೆದಿದ್ದಾರೆ.
ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.
ಬಿಜಿಎಸ್ ಆಸ್ಪತ್ರೆಯಿಂದ ಪಾರ್ಥಿವ ಶರೀರರನ್ನು ಬನಶಂಕರಿಯಲ್ಲಿರುವ  ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎನ್ನಲಾಗಿದೆ.
1934 ಫೆಬ್ರವರಿ 15 ರಂದು ಮೈಸೂರಿನಲ್ಲಿ ಜನಿಸಿದ್ದ ಮಾಸ್ಟರ್ ಹಿರಣ್ಣಯ್ಯ ಮಾತಿನ ಮಲ್ಲ ಎಂದೇ ಚಿರಪರಿಚಿತರಾಗಿದ್ದರು. ವೃತ್ತಿ ರಂಗಭೂಮಿಯಲ್ಲಿ  ತಮ್ಮದೇ ಆದ ವಿಶಿಷ್ಠ ಛಾಪು ಮೂಡಿಸಿದ್ದರು. ಲಂಚಾವತರ ನಾಟಕದಲ್ಲಿನ ಅಭಿನಯ ಅವರಿಗೆ ಹೆಚ್ಚಿನ ಖ್ಯಾತಿ ತಂದುಕೊಟ್ಟಿತ್ತು.
ಮಾಸ್ಟರ್  ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ  ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ  ವೈಶಿಷ್ಟ್ಯವಾಗಿತ್ತು
ಕೇರ್ ಆಫ್ ಪುಟ್ ಪಾತ್, ನಂ.73 ಶಾಂತಿ ನಿವಾಸ, ಗಜ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದ ಅಭಿನಯಿಸಿದ್ದ ಮಾಸ್ಟರ್  ಹಿರಣ್ಣಯ್ಯ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ,ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT