ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಪಂಚಭೂತಗಳಲ್ಲಿ ಲೀನ 
ಸಿನಿಮಾ ಸುದ್ದಿ

ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಪಂಚಭೂತಗಳಲ್ಲಿ ಲೀನ

ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ನಯ್ಯ ಇಂದು (ಗುರುವಾರ) ವಿಧಿವಶರಾಗಿದ್ದು ಇವರ ಅಂತ್ಯ ಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ಸಂಜೆ ನೆರವೇರಿದೆ.

ಬೆಂಗಳೂರು: ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ನಯ್ಯ ಇಂದು (ಗುರುವಾರ) ವಿಧಿವಶರಾಗಿದ್ದು ಇವರ ಅಂತ್ಯ ಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ಸಂಜೆ ನೆರವೇರಿದೆ.
ಸ್ಮಾರ್ಥ ಬ್ರಾಹ್ಮಣ ಸಂಒರದಾಯದಂತೆ ಅಂತ್ಯಕ್ರಿಯೆ ನಡೆದಿದ್ದು ಪುತ್ರರಾದ ಬಾಬು ಹಿರಣ್ಣಯ್ಯ, ಶ್ರೀಕಾಂತ್​ ಹಿರಣ್ಣಯ್ಯ ಮತ್ತು ಗುರುನಾಥ್​ ಹಿರಣ್ಣಯ್ಯ ವಿಧಿವಿಧಾನಗಳನ್ನು ಪೂರೈಸಿದ್ದಾರೆ. ಕಳಸಾಪುರದ ಶ್ರೀನಿವಾಸ ಶಾಸ್ತ್ರಿಗಳು ಅಂತ್ಯಕ್ರಿಯೆಯ ಪೂಜಾ ವಿಧಿವಿಧಾನಗಳನ್ನು ನಡೆಸಿಕೊಟ್ಟರು.
ಕೇವಲ ಕುಟುಂಬ ವರ್ಗ ಹಾಗೂ ಹತ್ತಿರದ ಆತ್ಮೀಯರ ಸಮ್ಮುಖದಲ್ಲಿ ಅಂತ್ಯಕ್ರಿಯೆಯ ವಿಧಿಗಳು ನೆರವೇರಿದವು. 
ಕೆಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಿರಣ್ಣಯ್ಯ ಅದಕ್ಕಾಗಿ ಚಿಕ್ತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಯಕೃತ್ತು (ಲಿವರ್) ಸಮಸ್ಯೆಯೂ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಕೆಂಗೇರಿ ಸಮೀಪದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. 
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಅವರಿಗೆ 85  ವರ್ಷ ವಯಸ್ಸಾಗಿತ್ತು. ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು, ಋಣಮುಕ್ತಳು ಆನಂದ ಸಾಗರ’, ‘ಕೇರ್ ಆಫ್ ಫುಟ್ ಪಾತ್’ ನಂ.73 ಶಾಂತಿ ನಿವಾಸ, ಗಜ ಇದೇ ಮೊದಲಾದ ಚಿತ್ರಗಳಲ್ಲಿ ಸಹ ನಟಿಸಿದ್ದರು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ  ವೈಶಿಷ್ಟ್ಯವಾಗಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT