ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಚೆಲುವೆ ಸಂಜನಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರವನ್ನು ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಮೂಲಕ ಟಿ. ಆರ್ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯ ಏಳನೇ ಚಿತ್ರ ಇದಾಗಿದ್ದು, ಕೃಷ್ಣ ಲೀಲಾ ಖ್ಯಾತಿಯ ಅಜಯ್ ರಾವ್ ನಾಯಕನಾಗಿದ್ದಾರೆ.
ಇದು ಅಜಯ್ ರವರದ್ದು 27 ನೇ ಸಿನಿಮಾ. ಗ್ರಾಮೀಣ ಸೊಗಡಿನ ಕಥೆಗೆ ಸೂಕ್ತವಾದ ನಾಯಕಿಗಾಗಿ ಹುಡುಕಾಟ ನಡೆಸಿದ ಚಿತ್ರತಂಡಕ್ಕೆ ಸಂಜಾನ ಆನಂದ್ ಸೇರ್ಪಡೆಯಾಗಿದ್ದಾರೆ.
ಮಂಡ್ಯ ,ಚೆನ್ನಪಟ್ಟಣ್ಣ , ಹಾಗೂ ಮದ್ದೂರಿನಲ್ಲಿ ಚಿತ್ರೀಕರಣ ಮಾಡಲು ತಂಡ ಸಿದ್ಧತೆ ನಡೆಸುತ್ತಿದೆ. ಪಡಿಸುತ್ತಿದೆ. ಶ್ರೀಧರ್. ವಿ. ಸಂಭ್ರಮ್ ರವರ ಸುಮಧುರ ಸಂಗೀತವಿದ್ದು , ಶಿವು ಸೀನು ಛಾಯಾಗ್ರಹಣವಿದೆ.ಈ ಚಿತ್ರಕ್ಕೆ ಕೆ.ಎಂ. ಪ್ರಕಾಶ್ ಸಂಕಲನವಿದು , ಅಷ್ಟೇ ಉತ್ತಮವಾದ ಸಂಭಾಷಣೆಯನ್ನು ಪ್ರಶಾಂತ್ ರಾಜಪ್ಪ ಬರೆಯುತ್ತಿದ್ದಾರೆ.
ಮುಂದಿನ ತಿಂಗಳ ಮೊದಲ ವಾರದಿಂದ ಶೂಟಿಂಗಿಗೆ ಹೊರಡಲು ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos