ಯಶ್ 
ಸಿನಿಮಾ ಸುದ್ದಿ

'ಜೋಡೆತ್ತು' ಸಿನಿಮಾದಲ್ಲಿ ಅಭಿನಯಿಸಲ್ಲ: ಮಂಡ್ಯದಲ್ಲಿ ರಾಕಿಂಗ್ ಸ್ಟಾರ್ ಸ್ಪಷ್ಟನೆ

ಲೋಕಾಸಭೆ ಚುನಾವಣೆ ಸಮಯ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕಿಳಿದಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತು ರಾಜಕೀಯ ನಾಯಕರು....

ಮಂಡ್ಯ: ಲೋಕಾಸಭೆ ಚುನಾವಣೆ ಸಮಯ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕಿಳಿದಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತು ರಾಜಕೀಯ ನಾಯಕರು "ಜೋಡೆತ್ತು", "ಕಳ್ಳೆತ್ತು" ಎಂಬೆಲ್ಲಾ ಟೀಕಿಸಿದ್ದದ್ದನ್ನು ನೀವು ಕೇಳಿದ್ದೀರಿ. ಇದೀಗ ಅದೇ ಹೆಸರನ್ನಿಟ್ತು ಸಿನಿಮಾ ತಯಾರಿಸಲು ನಿರ್ಮಾಪಕರು ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಸಾಲಾಗಿ ನಿಂತಿದ್ದಾರೆ. ಈ ನಡುವೆ ರಾಕಿ ಬಾಯ್ ಯಶ್ ಮಾತ್ರ ತಾವು "ಜೋಡೆತ್ತು" ಶೀರ್ಷಿಕೆಯ ಚಿತ್ರದಲ್ಲಿ ನಟಿಸಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ಅಭಿಮಾನಿಯೊಬ್ಬರ ಗೃಹಪ್ರವೇಶಕ್ಕೆ ಆಗಮಿಸಿದ್ದ ಯಶ್ ಸುಮಲತಾ ಪರ ನಾವು ಪ್ರಚಾರ ನಡೆಸಿದ್ದೇವೆ, ಮಂಡ್ಯ ಚುನಾವಣೆ ಮುಗಿದ ನಂತರ ನಾವು ಈ ಕಡೆ ತಲೆ ಹಾಕಿಲ್ಲ ಎಂಬ ಆರೋಪ ಸುಳ್ಳು. ಇಷ್ಟಕ್ಕೂ ನಾವೇನೂ ಇಲ್ಲಿನ ಅಭ್ಯರ್ಥಿಯಲ್ಲ. ಸುಮಲತಾ ಅಂಬರೀಶ್ ಇಲ್ಲಿನ ಅಭ್ಯರ್ಥಿ. ಅವರ ಪರ ಪ್ರಚಾರಕ್ಕೆ ಬಂದವರು ನಾವು. ಹಾಗಾಗಿ ಅಭ್ಯರ್ಥಿ ಸುಮಲತಾ ಈ ಕ್ಷೇತ್ರದಲ್ಲಿರುವುದು ಮುಖ್ಯ ಎಂದು ಹೇಳಿದ್ದಾರೆ. ಅಲ್ಲದೆ ತಾನು ಸಹ ಮತದಾನ ಮುಗಿದ ನಂತರ ಮೂರು-ನಾಲ್ಕು ಬಾರಿ ಈ ಕ್ಷೇತ್ರಕ್ಕೆ ಬಂದಿದ್ದಾಗಿ ಯಶ್ ಹೇಳಿದ್ದಾರೆ.
ಇನ್ನು ಮಂಡ್ಯ ಚುನಾವಣೆ ಫಲಿತಾಂಶದ ಕುರಿತು ಕೇಳಲಾಗಿ "ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಆದರೆ ಸುಮಕ್ಕ ಗೆಲುವಿಗೆ ಒಳ್ಳೆ ವಾತಾವರಣ ಇದೆ. ಅವರು ಗೆದ್ದರೆ ಜನರಿಗಾಗಿ ಉತ್ತಮ ಕೆಲಸ ಮಾಡಲಿದ್ದಾರೆ" ಎಂದು ಯಶ್ ಹೇಳಿದ್ದಾರೆ.
"ಜೋಡೆತ್ತು ಸಿನಿಮಾದಲ್ಲಿ ನಾನು ಅಭಿನಯಿಸುತ್ತಿಲ್ಲ. ದರ್ಶನ್ ನಂತಹಾ ದೊಡ್ಡ ಸ್ಟಾರ್ ನಟರೊಡನೆ ಸಿನಿಮಾ ಮಾಡಬೇಕಾದರೆ ಉತ್ತಮ ಕಥೆ ಸಿಕ್ಕಬೇಕು. ಒಳ್ಳೆ ಕಥೆ ಸಿಕ್ಕರೆ ನಾವಿಬ್ಬರೂ ಒಟ್ಟಾಗಿ ನಟಿಸಲು ಸಿದ್ದ " ರಾಕಿಬಾಯ್ ನುಡಿದರು.
ಇದಲ್ಲದೆ ಮಂಡ್ಯ ಮೈತ್ರಿ ಅಭ್ಯರ್ಥಿ ಸಿಎಂ ಪುತ್ರ ನಿಖಿಲ್ ಕುಮಾರ್ ಅವರಬಗ್ಗೆ ಟ್ರೋಲ್ ಆಗಿರುವ "ನಿಖಿಲ್ ಎಲ್ಲಿದ್ದಿಯಪ್ಪ" ಎಂಬ ನುಡಿಗಟ್ಟು ಸಹ ಈಗ ಸಿನಿಮಾ ಆಗಲು ತಯಾರಾಗಿದೆ. ಯಶ್ ಈ ಬಗ್ಗೆ ಮಾತನಾಡಿದ್ದು "ನಿಖಿಲ್ ಎಲ್ಲಿದ್ದಿಯಪ್ಪಾ ಸಿನಿಮಾಗೆ ಶುಭವಾಗಲಿ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!

ರಾಜ್ಯದಲ್ಲಿ SIR ಜಟಾಪಟಿ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು; ಸರ್ಕಾರದ ವಿರುದ್ದ ಗಂಭೀರ ಆರೋಪ

ಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!