ಅರುಂಧತಿ ನಾಗ್ 
ಸಿನಿಮಾ ಸುದ್ದಿ

ದೇಶ ಸರ್ವಾಧಿಕಾರತ್ವದ ಹಿಡಿತಕ್ಕೆ: ಅರುಂಧತಿ ನಾಗ್ ಆತಂಕ

ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಹೆಸರಾಂತ ರಂಗಕರ್ಮಿ, ಅರುಂದತಿ ನಾಗ್ ಆತಂಕ ವ್ಯಕ್ತಪಡಿಸಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನೈಜ ವಿಷಯಗಳು ಸಮಾಧಿಯಾಗಿದ್ದು, ಒಂದು ದೇಶವಾಗಿ, ಸರ್ವಾಧಿಕಾರ ವ್ಯವಸ್ಥೆಯತ್ತ ಹೋಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸರಿಯಾದದ್ದು ಅಲ್ಲ ಎಂದಿದ್ದಾರೆ.

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಹೆಸರಾಂತ ರಂಗಕರ್ಮಿ, ಅರುಂದತಿ ನಾಗ್ ಆತಂಕ ವ್ಯಕ್ತಪಡಿಸಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನೈಜ ವಿಷಯಗಳು ಸಮಾಧಿಯಾಗಿದ್ದು, ಒಂದು ದೇಶವಾಗಿ, ಸರ್ವಾಧಿಕಾರ ವ್ಯವಸ್ಥೆಯತ್ತ ಹೋಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸರಿಯಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ನಾನು ಸಂಪೂರ್ಣವಾಗಿ ಗೊಂದಲಮಯ ಹಾಗೂ ಒತ್ತಡದ ಸಂದರ್ಭದಲ್ಲಿದ್ದೇನೆ. ಕಳೆದ ಬಾರಿ ಅಧಿಕಾರಿ ಹಿಡಿದಿದ್ದ ಬಿಜೆಪಿ ಈ ಬಾರಿಯೂ ಅಧಿಕಾರ ಹಿಡಿಯುವುದು ಪ್ರಜಾಪ್ರಭುತ್ವಕ್ಕೆ ನ್ಯಾಯಸಮ್ಮತವಲ್ಲ, ಅಮೆರಿಕಾ, ಇಐ ಸಾಲ್ವಡಾರ್, ವೆನೆಜುವೆಲಾ, ರಷ್ಯಾ ಅಥವಾ ಭಾರತ ಮತ್ತಿತರ ರಾಷ್ಟ್ರಗಳು ಸರ್ವಾಧಿಕಾರತ್ವದ ಸಾಗುತ್ತಿರುವುದು ಆತಂಕ ಹುಟ್ಟಿಸಿದೆ ಎಂದು ಹೇಳಿದ್ದಾರೆ.

 ಸಮಾಜದ ಧ್ವನಿಯಾಗಿ ವಿಶ್ವದ ರಂಗಭೂಮಿ ಹೆಜ್ಜೆ ಇಡಲು ಇದು ಸೂಕ್ತ ಸಂದರ್ಭವಾಗಿದೆ ಎಂದು 62 ವರ್ಷದ ರಂಗ ಚಿಂತಕಿ ಅರುಂಧತಿ ನಾಗ್  ಅಭಿಪ್ರಾಯಪಟ್ಟಿದ್ದಾರೆ.

ರಂಗ ಕಲಾವಿದರಾಗಿ ಸರಿಯಾದ ಮೌಲ್ಯಗಳ ಪರ ನಿಲುವು ತಾಳಬೇಕಾಗಿದೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕಿದೆ. ಇದಲ್ಲದೇ ರಂಗಕರ್ಮಿಗಳು ಇನ್ನೇನು ಮಾಡಬೇಕು?  ಈ ಸಂದರ್ಭದಲ್ಲಿ ಜನರ ಭಾಷೆಯಲ್ಲಿ ರಂಗಭೂಮಿ ಮಾತನಾಡಬೇಕಿದೆ. ಇದು ಎಚ್ಚರಿಸುವ ಕರೆ ಎಂದು ಭಾವಿಸುವುದಾಗಿ ಅವರು ಹೇಳಿದ್ದಾರೆ.
ಪ್ರಸ್ತುತ ಸರ್ಕಾರ ಭದ್ರತೆ ನೀಡುವಲ್ಲಿ ವಿಫಲವಾಗಿದೆ ಎಂದು ನಾನು ಹೇಳುವುದಿಲ್ಲ, ಆದರೆ, ತಪ್ಪಿನ ಅಂಶಗಳ ಬಗ್ಗೆ ಮಾತನಾಡುತ್ತಿದೆ. ನಾವು ಈಗಾಗಲೇ ಯುದ್ಧ ಮಾಡಿದ್ದು, ಹಲವರು ಹುತಾತ್ಮರಾಗಿದ್ದಾರೆ. ಮಾಸ್ಕಟ್ ನಂತೆ ಚುನಾವಣೆಯಲ್ಲಿ ಸೈನಿಕರನ್ನು  ಮುಂಚೂಣಿಗೆ ತರುವುದು  ನ್ಯಾಯಸಮ್ಮತ ಒಪ್ಪಂದವಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT