ದರ್ಶನ್ 
ಸಿನಿಮಾ ಸುದ್ದಿ

'ಅಮರ್' ಗಾಗಿ ದರ್ಶನ್ ಕೋಟ್ಯಾಧಿಪತಿ!

ನಾಗಶೇಖರ್ ನಿರ್ದೇಶನದ "ಅಮರ್" ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ಪಾಲಿನ ಚೊಚ್ಚಲ ಚಿತ್ರವಾಗಿದ್ದು ಬಿಡುಗಡೆಗೆ ಮುನ್ನವೇ ಭಾರೀ ನಿರೀಕ್ಷೆ ಹುಟ್ಟಿಸಿದೆ.

.ಬೆಂಗಳೂರು: ನಾಗಶೇಖರ್ ನಿರ್ದೇಶನದ "ಅಮರ್" ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ಪಾಲಿನ ಚೊಚ್ಚಲ ಚಿತ್ರವಾಗಿದ್ದು ಬಿಡುಗಡೆಗೆ ಮುನ್ನವೇ ಭಾರೀ ನಿರೀಕ್ಷೆ ಹುಟ್ಟಿಸಿದೆ.
ಈ ನಡುವೆ ನಾಗಶೇಖರ್ ಹೇಳಿದಂತೆ  ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಪ್ಲಸ್ ಪಾಯಿಂಟ್
ಇದಾಗ್ಯೂ ಚಿತ್ರತಂಡ ದರ್ಶನ್ ಈ ಚಿತ್ರದಲ್ಲಿ ಯಾವ ಬಗೆಯ ಪಾತ್ರ ಮಾಡಲಿದ್ದಾರೆನ್ನುವುದನ್ನು ಬಹಿರಂಗಪಡಿಸಿಲ್ಲ. ಪತ್ರಿಕೆಗೆ ಸಿಕ್ಕ ಮಾಹಿತಿಯ ಪ್ರಕಾರ  ದರ್ಶನ್ "ಅಮರ್" ನಲ್ಲಿ ಕೋಟ್ಯಾಧಿಪತಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಕೊಡವ ಹಾಡಾದ "ಜೋರು ಪಾಟ್ಟು" ಬಿಡುಗಡೆಯಾದಾಗಿನಿಂದ ಹೊಸದೊಂದು ಟ್ರೀಂಡ್ ಸೃಷ್ಟಿಸಿದ್ದು ಇದರಲ್ಲಿ ದರ್ಶನ್, ಅಭಿಷೇಕ್, ತಾನ್ಯಾ ಹೋಪ್, ರಚಿತಾ ರಾಮ್ ಸಹ ಅಭಿನಯಿಸುತ್ತಿದ್ದಾರೆ.ಮೇ 31ಕ್ಕೆ ಚಿತ್ರ ತೆರೆಕಾಣಲಿದ್ದು ಇದಾಗಲೇ ದಿನಗಣನೆ ಪ್ರಾರಂಬವಾಗಿದೆ.
ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರ ಕರ್ನಾಟಕದ 300, ದೇಶಾದ್ಯಂತ 100ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುವ ನಿರೀಕ್ಷೆ ಇದೆ.
ಚಿತ್ರವು ಜುಲೈ  6ರಂದು ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಸಂಗೀತವಿರುವ ಈ ಚಿತ್ರಕ್ಕೆ ಸತ್ಯ ಹೆಗ್ಡೆ ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT