ಸಿನಿಮಾ ಸುದ್ದಿ

ಸಾಹಸ ಕಲಾವಿದರ ಸಂಘಕ್ಕೆ 10 ಲಕ್ಷ ರೂ. ದೇಣಿಗೆ ನೀಡಿದ ಕಿಚ್ಚ ಸುದೀಪ್

Vishwanath S

ಬೆಂಗಳೂರು: ಕೇವಲ ನಟನೆ ಮಾತ್ರವಲ್ಲದೆ, ಕನ್ನಡ ಚಿತ್ರರಂಗದಲ್ಲಿ ನೊಂದವರಿಗೆ ಸಹಾಯ ಹಸ್ತ ಚಾಚುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಈಗ ಫೈಟರ್ ಅಸೋಸಿಯೇಷನ್ ಬೆಂಬಲಕ್ಕೆ ನಿಂತಿದ್ದಾರೆ.

ಬೆಂಗಳೂರಿನ ನಾಯಂಡ ಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಸಾಹಸ ಕಲಾವಿದರ ಸಂಘದ ಕಟ್ಟಡ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಕುರಿತು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಟ್ವಿಟ್ಟರ್ ನಲ್ಲಿ ಈ ವಿಷಯ ಪ್ರಕಟಿಸಿದ್ದಾರೆ.

"ನನ್ನ ಆತ್ಮೀಯ ಸ್ನೇಹಿತ, ಸೂಪರ್ ಸ್ಟಾರ್ ಕಿಚ್ಚ ಸುದೀಪ್ ನಾವು ನಿರ್ಮಾಣ ಮಾಡುತ್ತಿರುವ ಸಾಹಸ ಕಲಾವಿದರ ಸಂಘದ ಕಟ್ಟಡಕ್ಕೆ ದೇಣಿಗೆಯಾಗಿ 10 ಲಕ್ಷ ರೂಪಾಯಿ ನೀಡಿದ್ದಾರೆ. ಅವರ ಈ ಸಹಾಯಕ್ಕೆ ನಾವೆಂದಿಗೂ ಚಿರ ಋಣಿ ಎಂದು ಬರೆದುಕೊಂಡಿದ್ದಾರೆ.

SCROLL FOR NEXT