ತಮ್ಮ ಮಕ್ಕಳೊಡನೆ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ 
ಸಿನಿಮಾ ಸುದ್ದಿ

ಎರಡನೇ ಬಾರಿ ತಾಯ್ತನದ ಸುಖ ಅನುಭವಿಸಿದ್ದು ಖುಷಿ ತಂದಿದೆ: ರಾಧಿಕಾ ಪಂಡಿತ್

ಎರಡನೇ ಬಾರಿಗೆ ತಾಯ್ತನದ ಸುಖ ಅನುಭವಿಸುವ ಅವಕಾಶ ಲಭಿಸಿದ್ದು ಖುಷಿಯನ್ನು ತಂದಿದೆ ಎಂದು ಸ್ಯಾಂಡಲ್ ವುಡ್ ನಟಿ, ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಹೇಳಿದ್ದಾರೆ. 

ಬೆಂಗಳೂರು: ಎರಡನೇ ಬಾರಿಗೆ ತಾಯ್ತನದ ಸುಖ ಅನುಭವಿಸುವ ಅವಕಾಶ ಲಭಿಸಿದ್ದು ಖುಷಿಯನ್ನು ತಂದಿದೆ ಎಂದು ಸ್ಯಾಂಡಲ್ ವುಡ್ ನಟಿ, ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಹೇಳಿದ್ದಾರೆ. ಗಂಡುಮಗುವಿಗೆ ಜನ್ಮ ನೀಡಿದ್ದ ರಾಧಿಕಾ ಪಂಡಿತ್ ಇಂದು ಫೋರ್ಟಿಸ್ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿದ್ದು ಈ ವೇಳೆ ಅವರು ಮಾದ್ಯಮಗಳನ್ನುದ್ದೇಶಿಸಿ ಮಾತನಾದಿದ್ದಾರೆ.

ಅಕ್ಟೋಬರ್​ 30ರಂದು ರಾಧಿಕಾ ಗಂಡುಮಗುವಿಗೆ ಜನ್ಮ ನೀಡಿದ್ದರು.ಇದಾಗಿ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ನಟಿ ಇಂದು ಮನೆಗೆ ಮರಳಿದ್ದಾರೆ.

ಇದರ ನಡುವೆ ಆಸ್ಪತ್ರೆಯಿಂದ ಮನೆಗೆ ತೆರಳುವ ಮುನ್ನ ಯಶ್ ಹಾಗೂ ರಾಧಿಕಾ ದಂಪತಿ ಮಾದ್ಯಮದೊಡನೆ ಮಾತನಾಡಿದ್ದಾರೆ. "ಇನ್ನೊಮ್ಮೆ ತಾಯ್ತನದ ಸುಖ ಅನುಭವಿಸುವ ಅವಕಾಶ ದೊರಕಿದ್ದು ತುಂಬಾ ಸಂತೋಷ ತಂದಿದೆ. ನನಗೆ ಹೆರಿಗೆಯನ್ನು ಆರಾಮದಾಯಕವಾಗುವಂತೆ ಮಾಡಿದ ವೈದ್ಯರ ತಂಡಕ್ಕೆ ಧನ್ಯವಾದ. ನನಗೆ ಶುಭಹಾರೈಸಿದ ಎಲ್ಲಾ ಅಭಿಮಾನಿಗಳಿಗೆ ನಾನು ಆಭಾರಿಯಾಗಿದ್ದೇನೆ" ರಾಧಿಕಾ ಹೇಳಿದ್ದಾರೆ.

"ತಾಯಿ-ಮಗು ಇಬ್ಬರೂ ಆರೋಗ್ಯದಿಂದಿದ್ದಾರೆ. ಈ ಬಾರಿ ಹೆರಿಗೆ ವೇಳೆ ಶೂಟ್ಂಗ್ ಎಲ್ಲಾ ಬಿಟ್ಟು ಪತ್ನಿಯೊಡನೆ ಕಾಲ ಕಳೆದಿದ್ದು ಸಂತಸವಾಗಿದೆ. ದೇವರ ದಯೆ ಈಗ ಕಂಪ್ಲೀಟ್ ಫ್ಯಾಮಿಲಿ ಆಗಿದೆ." ಯಶ್ ಹೇಳಿದ್ದು ಅಭಿಮಾನಿಗಳಿಗೆ ಸ್ಪೆಷಲ್ ಥ್ಯಾಂಕ್ಸ್ ಸಹ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT