ಬೆಂಗಳೂರು: ಬಂಡೀಪುರ ಅರಣ್ಯಕ್ಕೆ ಭೇಟಿ ನೀಡಿರುವ ಶ್ರೀಮುರಳಿ, ಅಲ್ಲಿರುವ ಕಾಡು ಜನ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕೆಲ ಸಮಯ ಕಳೆದರು.
ಕರ್ನಾಟಕ ಸರ್ಕಾರದ ವನ್ಯಜೀವಿ ಸಂರಕ್ಷಣಾ ರಾಯಭಾರಿಯಾಗಿ ಸೆಪ್ಟೆಂಬರ್ ನಲ್ಲಿ ಆಯ್ಕೆಯಾದ ರೋರಿಂಗ್ ಸ್ಟಾರ್ ಶ್ರೀಮುರಳಿ ತಮ್ಮ ಸಿನಿಮಾ ಪ್ರಚಾರ, ಶೂಟಿಂಗ್ ಮಧ್ಯೆ ಬಿಡುವು ಮಾಡಿಕೊಂಡು ಬಂದು ಅಲ್ಲಿನ ಸಿಬ್ಬಂದಿ ಮತ್ತು ವನವಾಸಿಗಳೊಂದಿಗೆ ಕಳೆದು ಖುಷಿಪಟ್ಟರು.
ಬಂಡೀಪುರದಲ್ಲಿ ಅರಣ್ಯಾಧಿಕಾರಿಗಳ ಜೊತೆ ಸುತ್ತಾಡಿ ಪ್ರಕೃತಿ ಸೌಂದರ್ಯ, ಪ್ರಾಣಿ ಪಕ್ಷಿಗಳನ್ನು ನೋಡುತ್ತಾ ಮಾತುಕತೆಯಾಡುತ್ತಾ ಸುತ್ತಾಡಿದರು. ಅಲ್ಲಿನ ಸಿಬ್ಬಂದಿ ಮತ್ತು ಕಾಡುಜನರ ಗುಡಿಸಲುಗಳಿಗೆ ಭೇಟಿ ನೀಡಿದರು. ಅಲ್ಲಿದ್ದ ಮಕ್ಕಳಿಗೆ ಕೆಲವೊಂದು ಉಡುಗೊರೆಗಳನ್ನು ನೀಡಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನೌಕರರು .ಮಾವುತರು ಹಾಗೂ ಕಾಡಿನ ಜನರೊಂದಿಗೆ ರೋರಿಂಗ್ ಸ್ಟಾರ್ ಮುರುಳಿ
ವರದಿ: ಗೂಳಿಪುರ ನಂದೀಶ್