ಗಣೇಶ್ - ಧೃವ ಸರ್ಜಾ 
ಸಿನಿಮಾ ಸುದ್ದಿ

'ವಿವಾಹಿತರ ಸಂಘಕ್ಕೆ ಸ್ವಾಗತ’: ಧೃವ ಸರ್ಜಾ ಕಾಲೆಳೆದ ಗೋಲ್ಡನ್ ಸ್ಟಾರ್

ಇದೇ ತಿಂಗಳ ೨೪ರಂದು ಬಾಲ್ಯದ ಗೆಳತಿಯೊಡನೆ ಸಪ್ತಪದಿ ತುಳಿಯಲಿರುವ ಭರ್ಜರಿ ಹುಡುಗ ಧೃವ ಸರ್ಜಾ ಮದುವೆಯ ಕರೆಯೋಲೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಬೆಂಗಳೂರು: ಇದೇ ತಿಂಗಳ ೨೪ರಂದು ಬಾಲ್ಯದ ಗೆಳತಿಯೊಡನೆ ಸಪ್ತಪದಿ ತುಳಿಯಲಿರುವ ಭರ್ಜರಿ ಹುಡುಗ ಧೃವ ಸರ್ಜಾ ಮದುವೆಯ ಕರೆಯೋಲೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಚಂದನವನದ ತಮ್ಮ ಆತ್ಮೀಯರಿಗೆ ಆಮಂತ್ರಣ ಪತ್ರಿಕೆ ಹಂಚುತ್ತಿರುವ ಧೃವ ಸರ್ಜಾ ಇಂದು ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನೂ ಮದುವೆಗೆ ಆಮಂತ್ರಿಸಿ ಪತ್ರಿಕೆ ನೀಡಿದ್ದಾರೆ.

ಆರ್ ಆರ್ ನಗರದ ಮನೆಗೆ ಆಗಮಿಸಿ ಆಹ್ವಾನ ನೀಡಿದ ಧೃವ ಸರ್ಜಾಗೆ ಗಣೇಶ್ ಶುಭಾಶಯ ತಿಳಿಸಿದ್ದಾರೆ.

ಬಳಿಕ ಟ್ವಿಟರ್ ನಲ್ಲಿ ಧೃವ ಜತೆಗಿನ ಭೇಟಿಯ ಫೋಟೊ ಶೇರ್ ಮಾಡಿರುವ ಗಣೇಶ್, ಇದೇ ೨೪ರಂದು ನಿನ್ನ ಮದುವೆಯಾಗುತ್ತಿದೆ. ಹೀಗಾಗಿ ನಮ್ಮ ಸಂಘಕ್ಕೆ ಅಂದರೆ ವಿವಾಹಿತರ ಸಂಘಕ್ಕೆ ಸ್ವಾಗತ ಎಂದು ತಮಾಷೆ ಮಾಡಿದ್ದಾರೆ.

ಧ್ರುವ ಸರ್ಜಾ, ನಟ ಪ್ರಜ್ವಲ್ ದೇವರಾಜ್, ನಿರ್ದೇಶಕ ಮಹೇಶ್ ಕುಮಾರ್, ಬಿಗ್ ಬಾಸ್ ಸ್ಪರ್ಧಿ ಪ್ರಥಮ್ ಸೇರಿದಂತೆ ಅನೇಕರಿಗೆ ಈಗಾಗಲೇ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT