ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಶಿವಣ್ಣ ಅಭಿಮಾನಿಗಳಿಗೆ ಸಿಹಿ ಸುದ್ದಿ: 'ಆಯುಷ್ಮಾನ್‌ಭವ' ನ. ೧೫ರಂದು ತೆರೆಗೆ

ಅಂತೂ ಇಂತೂ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಪಿ ವಾಸು ನಿರ್ದೇಶನದ 'ಆಯುಷ್ಮಾನ್‌ಭವ’ ಚಿತ್ರ ಮುಂದಿನ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಬೆಂಗಳೂರು: ಅಂತೂ ಇಂತೂ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಪಿ ವಾಸು ನಿರ್ದೇಶನದ 'ಆಯುಷ್ಮಾನ್‌ಭವ’ ಚಿತ್ರ ಮುಂದಿನ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ನವೆಂಬರ್ ೧ರಂದೇ ಚಿತ್ರ ಬಿಡುಗಡೆಗೊಳಿಸಲು ನಿರ್ಮಾಪಕ ದ್ವಾರಕೀಶ್ ಪ್ರಯತ್ನಿಸಿದ್ದರು. ಖಂಡಿತಾ ಅಂದೇ ಬಿಡುಗಡೆಗೆ ಅವಕಾಶ ಸಿಗುತ್ತದೆ ಎಂಬ ಆತ್ಮವಿಶ್ವಾಸದಲ್ಲಿ ದಿನಾಂಕವನ್ನೂ ಘೋಷಿಸಿದ್ದರು. ಆದರೆ ಸೆನ್ಸಾರ್ ಅರ್ಹತಾ ಪತ್ರ ಕೈ ಸೇರದ ಕಾರಣ ಚಿತ್ರ ಬಿಡುಗಡೆ ವಿಳಂಬವಾಗಿತ್ತು.

ನವೆಂಬರ್ ೧ ರಂದು ಬೆಳ್ಳಿಪರದೆಯ ಮೇಲೆ ಶಿವಣ್ಣನನ್ನು ನೋಡಬೇಕೆಂದು ಕಾದುಕುಳಿತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು ಸುಳ್ಳಲ್ಲ. ಅಂತೂ ಇಂತೂ ಸೆನ್ಸಾರ್ ಯು/ಎ ಅರ್ಹತಾ ಪತ್ರ ನೀಡಿದ್ದು, ನ. ೧೫ರಂದು ಬೆಂಗಳೂರಿನ ಸಂತೋಷ್, ಪ್ರಸನ್ನ ಸೇರಿದಂತೆ ರಾಜ್ಯಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಆಯುಷ್ಮಾನ್‌ಭವ’ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT