ಸುದೀಪ್ 
ಸಿನಿಮಾ ಸುದ್ದಿ

ಅಜಯ್ ರಾವ್ ನಟನೆಯ ಕೃಷ್ಣ ಟಾಕೀಸ್ ಗೆ ಸುದೀಪ್ ಗಾಯನ

ಅಜೇಯ್‌ರಾವ್‌ ಅಭಿನಯದ “ಕೃಷ್ಣ ಟಾಕೀಸ್‌’ ಚಿತ್ರಕ್ಕೆ ಹಾಡೊಂದನ್ನು ಹಾಡಲು ನಟ ಕಿಚ್ಚ ಸುದೀಪ್ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. 

ಅಜೇಯ್‌ರಾವ್‌ ಅಭಿನಯದ “ಕೃಷ್ಣ ಟಾಕೀಸ್‌’ ಚಿತ್ರಕ್ಕೆ ಹಾಡೊಂದನ್ನು ಹಾಡಲು ನಟ ಕಿಚ್ಚ ಸುದೀಪ್ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. 

ಸುದೀಪ್‌ ಒಳ್ಳೆಯ ಗಾಯಕರು ಅನ್ನೋದು ಎಲ್ಲರಿಗೂ ಗೊತ್ತು. ಅವರು ಸುಮ್ಮನೆ ಹಾಡಲು ಒಪ್ಪುವುದಿಲ್ಲ. ಸಾಹಿತ್ಯ ಇಷ್ಟವಾಗಬೇಕು, ಟ್ಯೂನ್‌ ಚೆನ್ನಾಗಿದೆ ಎನಿಸಬೇಕು. ಎಲ್ಲದ್ದಕ್ಕೂ ಹೆಚ್ಚಾಗಿ, ಟ್ರೆಂಡಿ ಸಾಂಗ್‌ ಅಂದರೆ ಅವರು ಹಾಡಲು ಮುಂದಾಗುತ್ತಾರೆ.

ಅಷ್ಟಕ್ಕೂ ಸುದೀಪ್‌ ಹಾಡಲು ಒಪ್ಪಿರೋದು ಸಂಗೀತ ನಿರ್ದೇಶಕ ಶ್ರೀಧರ್‌ ವಿ.ಸಂಭ್ರಮ್‌ ಅವರಿಗಾಗಿ. ಹೌದು, ಸುದೀಪ್‌ ಅವರನ್ನು ಇತ್ತೀಚೆಗೆ ಶ್ರೀಧರ್‌ ವಿ. ಸಂಭ್ರಮ್‌ ಅವರು ಭೇಟಿಯಾಗಿ ಹಾಡುವಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ಸುದೀಪ್‌ ಹಾಡುವ ಟ್ರಾಕ್‌ ಸಾಂಗ್‌ ಅನ್ನು ಸಹ ಸುದೀಪ್‌ ಅವರಿಗೆ ಕೇಳಿಸಿದ್ದಾರೆ. ಹಾಡು ಕೇಳಿದ ಸುದೀಪ್‌, ಇಷ್ಟಪಟ್ಟು, ಹಾಡುವುದಾಗಿ ಹೇಳಿದ್ದಾರೆ.

ಪ್ರಮೋದ್‌ ಮರವಂತೆ ಮತ್ತು ಅಭಿ ಎಸ್‌. ಇಬ್ಬರೂ ಸೇರಿ ಬರೆದಿರುವ “ನೈಟಿ ಮಾತ್ರ ಹಾಕೋಬೇಡ ಮೇನಕ, ನಮಗೆ ನೈಂಟಿ ಹೊಡದಂಗಾಗ್ತದೆ ಜೀವಕ…’ ಎಂಬ ಹಾಡಿಗೆ ಸುದೀಪ್‌ ಅವರು ಧ್ವನಿಯಾಗಲಿದ್ದಾರೆ. ಈ ಚಿತ್ರವನ್ನು ವಿಜಯ್‌ ಆನಂದ್‌ ನಿರ್ದೇಶಿಸಿದ್ದು, ಗೋವಿಂದರಾಜು ನಿರ್ಮಾಣ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT