ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಹೊಸ ಅವತಾರದಲ್ಲಿ `ದಾರಿ ತಪ್ಪಿದ ಮಗ’

ನಾಲ್ಕೂವರೆ ದಶಕಗಳ ಹಿಂದೆ ಒಮ್ಮೆ ತಿರುಗಿನೋಡಿದರೆ, ಚಂದನವನದಲ್ಲಿ ಅದೆಷ್ಟು ಚಂದದ ಚಿತ್ರಗಳು ತೆರೆಗೆ ಬಂದಿದ್ದವು, ಅಂತಹ ಸದಭಿರುಚಿಯ ಚಿತ್ರಗಳು ಈಗೇಕಿಲ್ಲ ಎನಿಸುತ್ತದೆ. ಈ ನಿಟ್ಟಿನಲ್ಲಿ, ಅಂದಿನ ಕಾಲಘಟ್ಟದ ಚಿತ್ರಗಳನ್ನು...

ಬೆಂಗಳೂರು: ನಾಲ್ಕೂವರೆ ದಶಕಗಳ ಹಿಂದೆ ಒಮ್ಮೆ ತಿರುಗಿನೋಡಿದರೆ, ಚಂದನವನದಲ್ಲಿ ಅದೆಷ್ಟು ಚಂದದ ಚಿತ್ರಗಳು ತೆರೆಗೆ ಬಂದಿದ್ದವು, ಅಂತಹ ಸದಭಿರುಚಿಯ ಚಿತ್ರಗಳು ಈಗೇಕಿಲ್ಲ ಎನಿಸುತ್ತದೆ. ಈ ನಿಟ್ಟಿನಲ್ಲಿ, ಅಂದಿನ ಕಾಲಘಟ್ಟದ ಚಿತ್ರಗಳನ್ನು ನೋಡಬಯಸುವ ಪ್ರೇಕ್ಷಕರಿಗಾಗಿ ೧೯೭೫ರಲ್ಲಿ ತೆರೆಕಂಡ 'ದಾರಿ ತಪ್ಪಿದ ಮಗ’ ಮತ್ತೆ ಹೊಸ ಅವತಾರದಲ್ಲಿ ಬರಲಿದೆ.

ಅಂದು ಪೇಕೇಟಿ ಶಿವರಾಂ ನಿರ್ಮಿಸಿ ನಿರ್ದೇಶಿಸಿದ್ದ ಬಹುತಾರಾಗಣದ ಚಿತ್ರದಲ್ಲಿ ರಸಿಕರ ರಾಜ, ಕರ್ನಾಟಕ ರತ್ನ ಡಾ ರಾಜ್‌ಕುಮಾರ್, ಜಯಮಾಲಾ, ಆರತಿ, ಕಲ್ಪನಾ, ಮಂಜುಳ ನಾಯಕ, ನಾಯಕಿಯರಾಗಿದ್ದರೆ, ಪೋಷಕ ಪಾತ್ರದಲ್ಲಿ ಎಂ ವಿ ರಾಜಮ್ಮ, ವಜ್ರಮುನಿ, ಕೆ ಎಸ್ ಅಶ್ವತ್ಥ್ ಮೊದಲಾದವರಿದ್ದಾರೆ.

ಇದೇ ನವೆಂಬರ್ 22ರಂದು ದಾರಿತಪ್ಪಿದ ಮಗ ಮತ್ತೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. 

ಅಂದು 35 ಎಂ ಎಂನಲ್ಲಿದ್ದ ಚಿತ್ರವನ್ನು ಇಂದು ಸಿನಿಮಾಸ್ಕೋಪ್ 7.1 ಡಿಟಿಎಸ್ 2ಕೆ ತಂತ್ರಜ್ಞಾನ ಅಳವಡಿಸಲಾಗಿದ್ದು, ಮುನಿರಾಜು ಅವರು ಚಿತ್ರ ನಿರ್ಮಾಣ ಸಂಸ್ಥೆ ಜಯಪ್ರಭ ಪ್ರೊಡಕ್ಷನ್ಸ್ ಮೂಲಕ ಹೊರತರುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT