ಸುದೀಪ್ 
ಸಿನಿಮಾ ಸುದ್ದಿ

ರಿಮೇಕ್ ಅಲ್ಲ ಸ್ವಮೇಕ್: ಮತ್ತೆ ನಿರ್ದೇಶನಕ್ಕಿಳಿದ ಸುದೀಪ್ ಸ್ಪಷ್ಟನೆ

ಸ್ಯಾಂಡಲ್​ವುಡ್ ಬಾದ್​ಷಾ ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಜೋರಾಗಿ ಕೇಳಿ ಬರುತ್ತಿತ್ತು. ಅದು ಯಾವ ಸಿನಿಮಾ, ರಿಮೇಕಾ ಇಲ್ಲ ಸ್ವಮೇಕಾ ಎಂಬ ಪ್ರಶ್ನೆಗಳು ಸಹ ಅಭಿನಯ ಚಕ್ರವರ್ತಿ ಅಭಿಮಾನಿಗಳಲ್ಲಿತ್ತು.

ಬೆಂಗಳೂರು: ಸ್ಯಾಂಡಲ್​ವುಡ್ ಬಾದ್​ಷಾ ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಜೋರಾಗಿ ಕೇಳಿ ಬರುತ್ತಿತ್ತು. ಅದು ಯಾವ ಸಿನಿಮಾ, ರಿಮೇಕಾ ಇಲ್ಲ ಸ್ವಮೇಕಾ ಎಂಬ ಪ್ರಶ್ನೆಗಳು ಸಹ ಅಭಿನಯ ಚಕ್ರವರ್ತಿ ಅಭಿಮಾನಿಗಳಲ್ಲಿತ್ತು. ಈ ಕುತೂಹಲಕಾರಿ ಪ್ರಶ್ನೆಗೆ ಖುದ್ದು ಕಿಚ್ಚ ಸುದೀಪ್ ಅವರೇ ಉತ್ತರಿಸಿದ್ದಾರೆ.

'ಮೈ ಆಟೋಗ್ರಾಫ್' ಸಿನಿಮಾ ಮೂಲಕ ನಿರ್ದೇಶಕರಾಗಿ ಭಡ್ತಿ ಪಡೆದ ಸುದೀಪ್ ನಟನೆಗೆ ಮಾತ್ರವಲ್ಲ ಆ್ಯಕ್ಷನ್ ಕಟ್​ಗೂ ಸೈ ಎಂದು ಮೊದಲ ಚಿತ್ರದಲ್ಲೇ ನಿರೂಪಿಸಿದ್ದರು. ಆ ಬಳಿಕ ನೋವು ನಲಿವಿನ ಕಥೆ ಹೇಳಿದ್ದ '73 ಶಾಂತಿ ನಿವಾಸ', ಮಾಸ್ ಪ್ರೇಕ್ಷಕರಿಗಾಗಿ 'ವೀರ ಮದಕರಿ', ಕೆಂಪೇಗೌಡ, ಯುವಪ್ರೇಮಿಗಳಿಗಾಗಿ ಜಸ್ಟ್ ಮಾತ್ ಮಾತಲ್ಲಿ' ಚಿತ್ರ ನಿರ್ದೇಶಿಸಿ ಸುದೀಪ್ ಮೋಡಿ ಮಾಡಿದ್ದರು.

ಅದರಲ್ಲೂ 2014ರಲ್ಲಿ 'ಮಾಣಿಕ್ಯ' ಚಿತ್ರವನ್ನು ನಟನೆಯೊಂದಿಗೆ ನಿರ್ದೇಶಿಸಿ ಬಾಕ್ಸಾಫೀಸ್​ನ್ನು ಕೊಳ್ಳೆ ಹೊಡೆದಿದ್ದರು. ಇದೀಗ ಐದು ವರ್ಷಗಳ ಬಳಿಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು 'ಪೈಲ್ವಾನ್' ರೆಡಿಯಾಗುತ್ತಿದ್ದಾರೆ. 

'ನಾನು ನಿರ್ದೇಶಿಸುತ್ತಿರುವುದು ಒರಿಜಿನಲ್ ಸ್ಕ್ರಿಪ್ಟ್​. ಈ ಚಿತ್ರದ ಕಥೆಗಾಗಿ ನಮ್ಮ ತಂಡದ ಸದಸ್ಯರು ಈಗಾಗಲೇ ತೊಡಗಿಸಿಕೊಂಡಿದ್ದಾರೆ. ಆ ಕಥೆಯ ಬಗ್ಗೆ ನಾನು ಕೂಡ ಉತ್ಸುಕನಾಗಿದ್ದೇನೆ. ಶೀಘ್ರದಲ್ಲೇ ಈ ಸಿನಿಮಾ ಸೆಟ್ಟೇರಲಿದೆ' ಎಂದು ಸ್ಯಾಂಡಲ್​ವುಡ್ ಬಿಗ್ ಬಾಸ್ ಸುದೀಪ್ ತಿಳಿಸಿದ್ದಾರೆ.ಅಲ್ಲಿಗೆ ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದ್ದ ರಿಮೇಕಾ, ಸ್ವಮೇಕಾ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ. ಸದ್ಯ ಸುದೀಪ್ ಶಿವ ಕಾರ್ತಿಕ್ ನಿರ್ದೇಶನದ ಕೋಟಿಗೊಬ್ಬ-3 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT