ಧನ್ವೀರ್ 
ಸಿನಿಮಾ ಸುದ್ದಿ

'ಬಂಪರ್' ಹಳೇ ಶೀರ್ಷಿಕೆ, ಧನ್ವೀರ್ ಚಿತ್ರಕ್ಕೆ ಹೊಸ ಚಿತ್ರಕಥೆ!

ಬಜಾರ್ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಧನ್ವೀರ್ ಇದೀಗ ಬಂಪರ್ ಎಂಬ ಎರಡನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಡಿಸೆಂಬರ್ ನಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಳ್ಳಲಿದ್ದು ಹೊಸ ಚಿತ್ರಕಥೆ ಬರೆಯಲು ನಿರ್ದೇಶಕರು ಮುಂದಾಗಿದ್ದಾರೆ. 

ಬಜಾರ್ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಧನ್ವೀರ್ ಇದೀಗ ಬಂಪರ್ ಎಂಬ ಎರಡನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಡಿಸೆಂಬರ್ ನಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಳ್ಳಲಿದ್ದು ಹೊಸ ಚಿತ್ರಕಥೆ ಬರೆಯಲು ನಿರ್ದೇಶಕರು ಮುಂದಾಗಿದ್ದಾರೆ. 

ಹರಿ ಸಂತೋಷ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು ಮತ್ತೊಬ್ಬ ನಿರ್ದೇಶಕ ಚೇತನ್ ಕುಮಾರ್ ಅವರು ಈ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದರು. ಆದರೆ ಇದೀಗ ಹರಿ ಸಂತೋಷ್ ಅವರು ತಾವೇ ಹೊಸ ಚಿತ್ರಕಥೆ ಬರೆಯಲು ಮುಂದಾಗಿದ್ದಾರೆ. 

ಇನ್ನು ಚೇತನ್ ಕುಮಾರ್ ನಿರ್ದೇಶನದ ಭರಾಟೆ ಚಿತ್ರದ ನಿರ್ಮಾಣ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿರ್ಮಾಪಕ ಸುಪ್ರೀತ್ ಬಂಪರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 

ಸೆಪ್ಟೆಂಬರ್ 8 ಧನ್ವೀರ್ ಹುಟ್ಟುಹಬ್ಬದಂದು ಬಂಪರ್ ಚಿತ್ರವನ್ನು ಘೋಷಿಸಲಾಗಿತ್ತು. ಸದ್ಯ ಹರಿ ಸಂತೋಷ್ ಕನ್ನಡದ ಕಾಲೇಜ್ ಕುಮಾರ್ ಚಿತ್ರವನ್ನು ತೆಲುಗಿನಲ್ಲಿ ನಿರ್ದೇಶನ ಮಾಡುತ್ತಿದ್ದು ಈ ಯೋಜನೆ ಮುಗಿದ ನಂತರ ಬಂಪರ್ ಕೈಗೆತ್ತಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT