ದ್ರುವನ್ ಚಿತ್ರದ ಮಹೂರ್ತದಲ್ಲಿ ದರ್ಶನ್ ಹಾಗೂ ಶಿವಣ್ಣ 
ಸಿನಿಮಾ ಸುದ್ದಿ

ಶಿವಣ್ಣ, ದರ್ಶನ್ ನನ್ನ ಚಿತ್ರದ ಮಹೂರ್ತಕ್ಕೆ ಆಗಮಿಸಿದ್ದು ಅದ್ಭುತ ಕ್ಷಣ: ಧ್ರುವನ್

ಸೂರಜ್ ಕುಮಾರ್ ಧ್ರುವನ್ ಆಗಿ ಹೆಸರು ಬದಲಿಸಿಕೊಂಡ ಬಳಿಕ ಅವರ ಅದೃಷ್ಟ ಖುಲಾಯಿಸಿದೆ.ರಘು ಕೋವಿ ನಿರ್ದೇಶನದಲ್ಲಿ ಈ ನವನಟ ಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಚಿತ್ರದ ಮಹೂರ್ತ ಶುಕ್ರವಾರ ನೆರವೇರಿದ್ದು ಈ ವೇಳೆ ಸ್ಟಾರ್ ನಟರಾದ  ಶಿವರಾಜ್‌ಕುಮಾರ್ ಮತ್ತು ದರ್ಶನ್ ಕ್ಲಾಪ್‌ಬೋರ್ಡ್‌ ಟೇಕ್ ಮಾಡಿ ಶುಭಕೋರಿದ್ದು ವಿಶೇಷವಾಗಿತ್ತು.

ಸೂರಜ್ ಕುಮಾರ್ ಧ್ರುವನ್ ಆಗಿ ಹೆಸರು ಬದಲಿಸಿಕೊಂಡ ಬಳಿಕ ಅವರ ಅದೃಷ್ಟ ಖುಲಾಯಿಸಿದೆ.ರಘು ಕೋವಿ ನಿರ್ದೇಶನದಲ್ಲಿ ಈ ನವನಟ ಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಚಿತ್ರದ ಮಹೂರ್ತ ಶುಕ್ರವಾರ ನೆರವೇರಿದ್ದು ಈ ವೇಳೆ ಸ್ಟಾರ್ ನಟರಾದ  ಶಿವರಾಜ್‌ಕುಮಾರ್ ಮತ್ತು ದರ್ಶನ್ ಕ್ಲಾಪ್‌ಬೋರ್ಡ್‌ ಟೇಕ್ ಮಾಡಿ ಶುಭಕೋರಿದ್ದು ವಿಶೇಷವಾಗಿತ್ತು.

ಬಿ.ಎಸ್.ಸುಧೀಂದ್ರ ನಿರ್ಮಿಸಿರುವ ಈ ಚಿತ್ರಮಲಯಾಳಂ ನಟಿ ಪ್ರಿಯಾ ವಾರಿಯರ್‌ಗೆ ಎರಡನೇ ಕನ್ನಡ ಚಿತ್ರವಾಗಿರಲಿದೆ.ಶ್ರೇಯಸ್ ಮಾನ್ಯು ಅಭಿನಯದ ’ವಿಷ್ಣು ಪ್ರಿಯಾ” ಈ ನಟಿಯ ಚ್ವೊಚ್ಚಲ ಕನ್ನಡ ಸಿನಿಮಾ ಆಗಿದೆ.

"ಇದು ನನ್ನ ಪಾಲಿನ ಅತ್ಯದ್ಭುತ ಕ್ಷಣ ಇದನ್ನು ನಾನು ಕೆಲವೇ ಮಾತುಗಳಲ್ಲಿ ಹೇಳಲು ಸಾಧ್ಯವಿಲ್ಲ." ಧ್ರುವನ್ ಹೇಳಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರ ಚಿತ್ರೀಕರಣ ಡಿಸೆಂಬರ್ ಎರಡನೇ ವಾರದಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ. ಇನ್ನು ಧ್ರುವನ್ ನಟ ನಿರ್ಮಾಪಕ ಎಸ್.ಎ.ಶ್ರೀನಿವಾಸ್ ಅವರ ಪುತ್ರರಾಗಿದ್ದಾರೆ. ಶ್ರೀನಿವಾಸ್ ಕನ್ನಡದ ವರನಟ ಡಾ. ರಾಜ್ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್ ಅವರ ಸಹೋದರ ಎನ್ನುವುದು ಗಾನೀಯ ಅಂಶ. ಚಿತ್ರದ ಸಂಗೀತವನ್ನು ಅರ್ಜುನ್ ಜನ್ಯಾ ಸಂಯೋಜಿಸಲಿದ್ದು, ಸತ್ಯ ಹೆಗ್ಡೆ ಕ್ಯಾಮರಾಮ್ಯಾನ್ ಆಗಿ ಸೈನ್ ಅಪ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT