ಟ್ರೇಲರ್ ಬಿಡುಗಡೆ 
ಸಿನಿಮಾ ಸುದ್ದಿ

'ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ರಿಲೀಸ್: ಭಾವುಕರಾಗಿ ಕಣ್ಣೀರಿಟ್ಟ ರಕ್ಷಿತ್

ಸ್ಯಾಂಡಲ್‌ವುಡ್‌ 'ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 'ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ಗುರುವಾರ ಬಿಡುಗಡೆಯಾಗಿದೆ.

ಬೆಂಗಳೂರು: ಸ್ಯಾಂಡಲ್‌ವುಡ್‌ 'ಕಿರಿಕ್ ಪಾರ್ಟಿ’ ಹೀರೋ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 'ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ಗುರುವಾರ ಬಿಡುಗಡೆಯಾಗಿದೆ.

ನಗರದ ಸಂಕೇತ್ ಶಂಕರ್‌ನಾಗ್ ಸ್ಟುಡಿಯೋದಲ್ಲಿ ಭರ್ಜರಿಯಾಗಿ ರಿಲೀಸ್ ಅಗಿರುವ ಶ್ರೀಮನ್ನಾರಾಯಣ ಟ್ರೇಲರ್ ಮನರಂಜನೆಯ ಫುಲ್‌ಮೀಲ್ಸನ್ನು ಬಾಳೆ ಎಲೆಯಲ್ಲಿ ಬಡಿಸುವ ಎಲ್ಲ ಲಕ್ಷಣಗಳನ್ನೂ ಹೊಂದಿದೆ.

'ಕಿರಿಕ್ ಪಾರ್ಟಿ’ ನಂತರ ೩ ವರ್ಷಗಳನ್ನು ಈ ಚಿತ್ರಕ್ಕಾಗಿಯೇ ಮೀಸಲಿಟ್ಟಿದ್ದೆ. ಕಳೆದ ಒಂದು ವರ್ಷದಿಂದ ಟ್ರೇಲರ್ ಬಿಡುಗಡೆಗಾಗಿ ನಾನೂ ಕೂಡ ಕಾಯುತ್ತಿದ್ದೆ’ ಎಂದ ರಕ್ಷಿತ್ ಶೆಟ್ಟಿ ಒಂದು ಕ್ಷಣ ಭಾವುಕರಾಗಿ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

"ನಾನು ಮೊದಲ ಶಾರ್ಟ್ ಮೂವಿ ಮಾಡುವಾಗ ಬಜೆಟ್ ಇರಲಿಲ್ಲ. ಎರಡನೇ ಶಾರ್ಟ್ ಮೂವಿಯನ್ನ ಕೇವಲ ಐದು ಸಾವಿರದಲ್ಲಿ ಮಾಡಿದೆ. ಶಾರ್ಟ್ ಮೂವಿ ಮಾಡುವಾಗ ಜೊತೆಯಾದ ಸ್ನೇಹಿತರು ಈಗಲೂ ನನ್ನ ಜೊತೆ ಇದ್ದಾರೆ. ಅವರೆಲ್ಲರ ಪರಿಶ್ರಮ ಪ್ರೋತ್ಸಾಹದಿಂದಾಗಿ ಇಂದು ಈ ಜಾಗದಲ್ಲಿ ನಿಲ್ಲಲು ಸಾಧ್ಯವಾಗಿದೆ" ಎಂದರು.

ಮಾತನಾಡುವಾಗ ಭಾವುಕರಾದ ರಕ್ಷಿತ್ ಶೆಟ್ಟಿ, ಕೆಲವು ಕ್ಷಣ ಮಾತು ಮರೆತು ಹೋಗಿ ಭಾವುಕರಾಗಿ ಅವರ ಕಣ್ಣಂಚು ಒದ್ದೆಯಾಯಿತು.

'ಅವನೇ ಶ್ರೀಮನ್ನಾರಾಯಣ’ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಹೊರಬರಲಿದ್ದು, ೩೦ ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿದೆ.

ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರ  ಇದಾಗಿದ್ದು, ೮೦ರ ದಶಕದ ಬ್ಯಾಕ್ ಡ್ರಾಪ್‌ನಲ್ಲಿ ಮೂಡಿಬಂದಿದೆ. ಸಚಿನ್ ರವಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ರಕ್ಷಿತ್ ಜೋಡಿಯಾಗಿ ಶಾನ್ವಿ ಶ್ರೀವಾತ್ಸವ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT