ರಾಗಿಣಿ - ಶರಣ್ 
ಸಿನಿಮಾ ಸುದ್ದಿ

ಯೋಗಾನಂದ್ ನಿರ್ದೇಶನದ ಚೊಚ್ಚಲ ಚಿತ್ರ 'ಅಧ್ಯಕ್ಷ ಇನ್ ಅಮೆರಿಕ' ನಾಳೆ ತೆರೆಗೆ

ಸೃಜನಶೀಲ ಕ್ಷೇತ್ರದಲ್ಲಿ ಸುಮಾರು 18 ವರ್ಷ ಅನುಭವ ಹೊಂದಿರುವ ಯೋಗಾನಂದ್ ಮುದ್ಧನ್ ಅವರು ಮೊದಲ ಬಾರಿಗೆ ನಿರ್ದೇಶನಕ್ಕೆ ಕೈಹಾಕಿದ್ದು, ಶರಣ್ ಹಾಗೂ ರಾಗಿಣಿ ದ್ವಿವೇದಿ ಅಭಿನಯದ 'ಅಧ್ಯಕ್ಷ ಇನ್ ಅಮೆರಿಕ' ಚಿತ್ರ ನಾಳೆ ತೆರೆಗಾಣುತ್ತಿದೆ.

ಸೃಜನಶೀಲ ಕ್ಷೇತ್ರದಲ್ಲಿ ಸುಮಾರು 18 ವರ್ಷ ಅನುಭವ ಹೊಂದಿರುವ ಯೋಗಾನಂದ್ ಮುದ್ಧನ್ ಅವರು ಮೊದಲ ಬಾರಿಗೆ ನಿರ್ದೇಶನಕ್ಕೆ ಕೈಹಾಕಿದ್ದು, ಶರಣ್ ಹಾಗೂ ರಾಗಿಣಿ ದ್ವಿವೇದಿ ಅಭಿನಯದ 'ಅಧ್ಯಕ್ಷ ಇನ್ ಅಮೆರಿಕ' ಚಿತ್ರ ನಾಳೆ ತೆರೆಗಾಣುತ್ತಿದೆ.

2001ರಿಂದ ಸಂಭಾಷಣೆ ಬರಹಗಾರ, ಹಲವು ಚಿತ್ರ, ಧಾರವಾಹಿ ಹಾಗೂ ನಾಟಕಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಯೋಗಾನಂದ್ ಅವರು ಇದೇ ಮೊದಲ ಬಾರಿಗೆ ರೋಮ್ಯಾಂಟಿಕ್ ಕಾಮಿಡಿ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಶರಣ್ ಹಾಗೂ ರಾಗಿಣಿ ಜೋಡಿಯ ಮೊದಲ ಮೋಡಿ ತೆರೆಯ ಮೇಲೆ ಮೂಡಿ ಬರುವುದಕ್ಕೆ ಕ್ಷಣಗಣನೆ ಆರಂಭವಾಗಿದೆ.

ದಸರಾ ಹಬ್ಬದ ಸಂದರ್ಭದಲ್ಲೇ ತಮ್ಮ ಚೊಚ್ಚಲ ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ಯೋಗಾನಂದ್ ಅವರು ಮತ್ತಷ್ಟು ಉತ್ಸುಕರಾಗಿದ್ದು, ಈ ಚಿತ್ರ ಶರಣ್ ವೃತ್ತಿ ಬದುಕಿನಲ್ಲಿಯೇ ಮಹತ್ವದ್ದಾಗಿಯೂ ಪರಿಗಣಿಸಲ್ಪಟ್ಟಿದೆ.

ನಾನು ಒಬ್ಬ ಡೈಲಾಗ್ ರೈಟರ್ ಆಗಿ ಚಿತ್ರ ಬಿಡುಗಡೆ ವೇಳೆ ಆ ಚಿತ್ರದ ನಿರ್ದೇಶಕರ ಏನು ಮಾಡುತ್ತಾರೆ ಎಂಬುದು ನನಗೆ ಚೆನ್ನಾಗಿ ಗೊತ್ತು. ಈಗ ಅದೇ ಸ್ಥಿತಿಯಲ್ಲಿ ನಾನಿದ್ದೇನೆ ಎಂದು ಯೋಗಾನಂದ್ ಅವರು ಹೇಳಿದ್ದಾರೆ.

ಬಜರಂಗಿ, ವಜ್ರಕಾಯ, ಮುಕುಂದ ಮುರಾರಿ ಮತ್ತು ಚೌಕಾ ಸೇರಿದಂತೆ ಹಲವು ಚಿತ್ರಗಳಿಗೆ ನಾನು ಡೈಲಾಗ್ ಬರೆದಿದ್ದೇನೆ ಮತ್ತು ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಆ ಅನುಭವವೇ ಇಂದು ನಾನು ಒಬ್ಬ ಸ್ವತಂತ್ರ ನಿರ್ದೇಶಕನಾಗಲು ಕಾರಣವಾಯಿತು ಎಂದಿದ್ದಾರೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರಿನಡಿಯಲ್ಲಿ ಟಿ ಜಿ ವಿಶ್ವಪ್ರಸಾದ್ ನಿರ್ಮಾಣ ಮಾಡಿರುವ ಅಧ್ಯಕ್ಷ ಇನ್ ಅಮೆರಿಕ ಚಿತ್ರವನ್ನು ನಿರ್ದೇಶನ ಮಾಡೋ ಭಾಗ್ಯ ಯೋಗಾನಂದ್ ಅವರಿಗೆ ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT