ಚಂದನ್ ಶೆಟ್ಟಿ 
ಸಿನಿಮಾ ಸುದ್ದಿ

ಎಂಗೇಜ್ ಮೆಂಟ್ ಅಲ್ಲ, ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ: ಚಂದನ್ ಶೆಟ್ಟಿ

ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಬೆಂಗಳೂರು: ಯುವ ದಸರಾ ವೇದಿಕೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ,ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. 

ಸರ್ಕಾರಿ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿಶ್ಚಿತಾರ್ಥಕ್ಕೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಯುವ ದಸರಾ ಉಪ ಸಮಿತಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ದಸರಾ ಮೇಲುಸ್ತುವಾರಿ ಸಚಿವ ವಿ. ಸೋಮಣ್ಣ,  ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಾಡ ಅಧಿದೇವತೆ ಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ದೇವಿ ಶಿಕ್ಷೆ ನೀಡುತ್ತಾಳೆ ಎಂದು ಕಿಡಿಕಾರಿದ್ದರು. 

ಇದಕ್ಕೆ ದಸರಾ ಉಪ ಸಮಿತಿ ಕಾರಣವಲ್ಲ, ಈ ಸಂಬಂಧ  ಯುವ ದಸರಾ ಉಪ ಸಮಿತಿಯ ಕಾರ್ಯಾಧ್ಯಕ್ಷರು ಆಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. 

ಸೋಮಣ್ಣ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ಖಾಸಗಿ ಚಾನೆಲ್ ವೊಂದರಲ್ಲಿ ಮಾತನಾಡಿರುವ ಚಂದನ್ ಶೆಟ್ಟಿ,  ಇದು ಎಂಗೇಜ್ ಮೆಂಟ್ ಅಲ್ಲ. ನನ್ನ ನಿರ್ಧಾರವಾಗಿತ್ತು. ಮನೋ ರಂಜನೆ ಮಾಡಬೇಕೆಂಬ ಉದ್ದೇಶದಿಂದ ಆ ರೀತಿಯಾಗಿ ವರ್ತಿಸಿದ್ದೇನೆ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ, ತಮ್ಮಿಂದ ತಪ್ಪಾಗಿದ್ದರೆ  ಸರ್ಕಾರದ ಬಳಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT