ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

'ಡಿಬಾಸ್' ಬಳಗದಿಂದ ಮತ್ತೊಬ್ಬರಿಗೆ ಗೇಟ್ ಪಾಸ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್  ಮ್ಯಾನೇಜರ್ ಶ್ರೀನಿವಾಸ್ ಅವರನ್ನು ಆ ಕೆಲಸದಿಂದ ಕಿತ್ತು ಹಾಕಲಾಗಿದೆ. ಈ ಬಗ್ಗೆ ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಷನ್ ಅಧಿಕೃತ ಖಾತೆಯಲ್ಲಿ ತಿಳಿಸಲಾಗಿದೆ. 

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್  ಮ್ಯಾನೇಜರ್  ಶ್ರೀನಿವಾಸ್ ಅವರನ್ನು   ಆ ಕೆಲಸದಿಂದ ಕಿತ್ತು ಹಾಕಲಾಗಿದೆ. ಈ ಬಗ್ಗೆ ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಷನ್ ಅಧಿಕೃತ ಖಾತೆಯಲ್ಲಿ ತಿಳಿಸಲಾಗಿದೆ. 

ಡಿಬಾಸ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ್ ಅವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘದ ವ್ಯವಹಾರಿಕ ಚಟುವಟಿಕೆಗಳಿಂದ ದೂರ ಸರಿಸಲಾಗಿದೆ. ಅವರ ಜೊತೆ ಡಿ ಬಾಸ್ ಅವರ ಹೆಸರಲ್ಲಿ ಯಾವುದೇ ವ್ಯವಹಾರ ಮಾಡದಿರಿ ಎಂದು ಡಿ ಕಂಪನಿ ಮನವಿ ಮಾಡಿಕೊಂಡಿದೆ.ಕಳೆದ ವರ್ಷ ಮಲ್ಲಿಕಾರ್ಜುನ ಕೂಡಾ ಹಣಕಾಸು ವ್ಯವಹಾರದ ವಿಚಾರವಾಗಿ ದರ್ಶನ್ ಗುಂಪಿನಿಂದ ಹೊರ ಬಂದಿದ್ದರು. 

ಮತ್ತೊಂದೆಡೆ ಇದನ್ನು ಫೇಸ್ ಬುಕ್ ಪೇಜ್ ನಲ್ಲಿ ಸ್ಪಷ್ಟಪಡಿಸಿರುವ ಶ್ರೀನಿವಾಸ್, ನನಗೂ ಮತ್ತು ದರ್ಶನ್ ತೂಗುದೀಪ ಅವರಿಗೂ ಕೆಲಸದ ವಿಷಯವಾಗಿ ಮನಸ್ತಾಪ ಬಂದಿರುವುದು ನಿಜ. ಆದ ಕಾರಣ ನಾನು ಸೆಪ್ಟೆಂಬರ್ 18, 2019 ರಿಂದ ಅವರ ಬಳಿ ಕೆಲಸ ಬಿಟ್ಟಿರುತ್ತೇನೆ. ನನ್ನ ಮೇಲೆ ಯಾರೂ ಸಹ ಇಲ್ಲ ಸಲ್ಲದ ಆರೋಪ ಹೊರಿಸಬೇಡಿ. ನನಗೂ ಕುಟುಂಬ ಇದೆ. ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಿಲ್ಲ. ಇಲ್ಲಿಯೇ ಕೆಲಸ ಮಾಡಿಕೊಂಡು ಇದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT