ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

‘ಕೃಷ್ಣ ಟಾಕೀಸ್’ನಲ್ಲಿ 'ನೈಟಿ ಮಾತ್ರ ಹಾಕೋಬೇಡ' ಐಟಂ ಸಾಂಗ್

ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ ಎಚ್ ನಿರ್ಮಿಸುತ್ತಿರುವ, ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣ ಟಾಕೀಸ್' ಚಿತ್ರಕ್ಕಾಗಿ ಐಟಂ ಸಾಂಗ್ ನ ಚಿತ್ರೀಕರಣ ನಡೆಸಲಾಗಿದೆ.

ಬೆಂಗಳೂರು: ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ ಎಚ್ ನಿರ್ಮಿಸುತ್ತಿರುವ, ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣ ಟಾಕೀಸ್' ಚಿತ್ರಕ್ಕಾಗಿ ಐಟಂ ಸಾಂಗ್ ನ ಚಿತ್ರೀಕರಣ ನಡೆಸಲಾಗಿದೆ.

ಅಭಿಷೇಕ್ ಹಾಗೂ ಪ್ರಮೋದ್ ಮರವಂತೆ ಬರೆದಿರುವ ‘ನೈಟಿ ಮಾತ್ರ ಹಾಕೋಬೇಡ ಮೇನಕ. ನಮಗೆ ನೈಂಟಿ ಹೊಡದಂಗೆ ಆಗ್ತದೆ ಜೀವಕ್ಕೆ’ ಎಂಬ ಹಾಡಿನ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಅದ್ದೂರಿ ಸೆಟ್‌ನಲ್ಲಿ ಮೂರು ದಿನಗಳ ಕಾಲ ನಡೆದಿದೆ.

ಭೂಷಣ್ ನೃತ್ಯ ನಿರ್ದೇಶನ ಮಾಡಿದ ಈ ಹಾಡಿನ ಚಿತ್ರೀಕರಣದಲ್ಲಿ ಅಜಯ್‌ರಾವ್, ಚಿಕ್ಕಣ್ಣ, ಲಾಸ್ಯ ನಾಗರಾಜ್ ಹಾಗೂ ಐವತ್ತಕ್ಕೂ ಹೆಚ್ಚು ಜನ ನೃತ್ಯ ಕಲಾವಿದರು ಅಭಿನಯಿಸಿದ್ದರು.

ವಿಜಯಾನಂದ್ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ೨೦ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ೬೦ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಹಾಗೂ ೪೦ಕ್ಕೂ ಹೆಚ್ಚು ಚಿತ್ರಗಳಿಗೆ ಗೀತರಚನೆ ಮಾಡಿರುವ ಆನಂದ ಪ್ರಿಯ ಈ ಚಿತ್ರದ ಮೂಲಕ ತಮ್ಮ ಹೆಸರನ್ನು ವಿಜಯಾನಂದ್ ಎಂದು ಬದಲಾವಣೆ ಮಾಡಿಕೊಂಡಿದ್ದಾರೆ.

ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಅಭಿಷೇಕ್ ಜಿ ಕಾಸರಗೋಡು ಅವರ ಛಾಯಾಗ್ರಹಣವಿದೆ. ಶ್ರೀಕಾಂತ್ ಸಂಕಲನ, ಮದನ್ - ಹರಿಣಿ, ಭೂಷಣ್ ನೃತ್ಯ ನಿರ್ದೇಶನ, ವಿಕ್ರಂ ಸಾಹಸ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಜಯ್ ರಾವ್, ಅಪೂರ್ವ, ಚಿಕ್ಕಣ್ಣ, ಸಿಂಧೂ ಲೋಕನಾಥ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಶೋಭ್‌ರಾಜ್, ಮಂಡ್ಯ ರಮೇಶ್,  ನಿರಂತ್, ಯಶ್ ಶೆಟ್ಟಿ, ಉಮೇಶ್, ಶ್ರೀನಿವಾಸ ಪ್ರಭು, ಶಾಂಭವಿ, ಲಕ್ಷ್ಮೀಗೌಡ, ಯಮುನ, ಧರ್ಮೇಂದ್ರ ಅರಸ್ ಮುಂತಾದವರಿದ್ದಾರೆ. ಲಾಸ್ಯ ನಾಗರಾಜ್ ಅತಿಥಿಪಾತ್ರದಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT