ದಿಗಂತ್ 
ಸಿನಿಮಾ ಸುದ್ದಿ

'ಹುಟ್ಟು ಹಬ್ಬದ ಶುಭಾಶಯಗಳು' ಹೇಳುತ್ತಿದ್ದಾರೆ ನಟ ದಿಗಂತ್ 

ನಟ ದಿಗಂತ್ ಅಭಿನಯದ ಮುಂದಿನ ಚಿತ್ರ ಹುಟ್ಟು ಹಬ್ಬದ ಶುಭಾಶಯಗಳು. ಅದರಲ್ಲಿ ದಿಗಂತ್ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನಟ ದಿಗಂತ್ ಅಭಿನಯದ ಮುಂದಿನ ಚಿತ್ರ ಹುಟ್ಟು ಹಬ್ಬದ ಶುಭಾಶಯಗಳು. ಅದರಲ್ಲಿ ದಿಗಂತ್ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗರಾಜ್ ಬೆತೂರ್ ನಿರ್ದೇಶನದ ಟಿ ಆರ್ ಚಂದ್ರಶೇಖರ್ ನಿರ್ಮಾಣದ ಚಿತ್ರ ಕ್ರಿಸ್ಟಲ್ ಪಾರ್ಕ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಳ್ಳುತ್ತಿದೆ. ಇಲ್ಲಿ ದಿಗಂತ್ ಅವರದ್ದು ನೆಗೆಟಿವ್ ಗುಣಗಳಿರುವ ನಾಯಕನ ಪಾತ್ರ.


ದೀಪಾವಳಿಗೆ ಚಿತ್ರತಂಡ ದಿಗಂತ್ ಅವರ ಲುಕ್ ನ್ನು ಬಿಡುಗಡೆ ಮಾಡಿದೆ. ಕಾಮಿಡಿ ಥ್ರಿಲ್ಲರ್ ಚಿತ್ರದಲ್ಲಿ ದಿಗಂತ್ ಅರ್ಜುನ್ ಆಗಿ ಅಭಿನಯಿಸುತ್ತಿದ್ದು ಅವರಿಗೆ ಕವಿತಾ ಗೌಡ ನಾಯಕಿ. 


ಚಿತ್ರದ ಇಡೀ ದೃಶ್ಯಗಳನ್ನು ರಾತ್ರಿ ಹೊತ್ತು ಚಿತ್ರೀಕರಿಸಬೇಕಂತೆ.ಹೀಗಾಗಿ ಇತ್ತೀಚೆಗೆ ಭಾರೀ ಮಳೆ ಬರುತ್ತಿರುವುದರಿಂದ ಚಿತ್ರೀಕರಣವನ್ನು ಈ ತಿಂಗಳಾಂತ್ಯಕ್ಕೆ ಮುಂದೂಡಲಾಗಿದೆ. 


ಚಿತ್ರಕ್ಕೆ ಆನಂದ್ ರಾಜ್ ವಿಕ್ರಮ್ ಸಂಗೀತ, ಅಭಿಲಾಷ್ ಕಲ್ಲಟಿ ಛಾಯಾಗ್ರಹಣವಿದೆ.ಈ ಮಧ್ಯೆ ದಿಗಂತ್ ಅವರು ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ, ಗಾಳಿಪಟ-2 ಮತ್ತು ವೇರ್ ಈಸ್ ಮೈ ಕನ್ನಡ ಚಿತ್ರಗಳಲ್ಲಿ ಕೂಡ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT