ದಿಗಂತ್ 
ಸಿನಿಮಾ ಸುದ್ದಿ

'ಹುಟ್ಟು ಹಬ್ಬದ ಶುಭಾಶಯಗಳು' ಹೇಳುತ್ತಿದ್ದಾರೆ ನಟ ದಿಗಂತ್ 

ನಟ ದಿಗಂತ್ ಅಭಿನಯದ ಮುಂದಿನ ಚಿತ್ರ ಹುಟ್ಟು ಹಬ್ಬದ ಶುಭಾಶಯಗಳು. ಅದರಲ್ಲಿ ದಿಗಂತ್ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನಟ ದಿಗಂತ್ ಅಭಿನಯದ ಮುಂದಿನ ಚಿತ್ರ ಹುಟ್ಟು ಹಬ್ಬದ ಶುಭಾಶಯಗಳು. ಅದರಲ್ಲಿ ದಿಗಂತ್ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗರಾಜ್ ಬೆತೂರ್ ನಿರ್ದೇಶನದ ಟಿ ಆರ್ ಚಂದ್ರಶೇಖರ್ ನಿರ್ಮಾಣದ ಚಿತ್ರ ಕ್ರಿಸ್ಟಲ್ ಪಾರ್ಕ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಳ್ಳುತ್ತಿದೆ. ಇಲ್ಲಿ ದಿಗಂತ್ ಅವರದ್ದು ನೆಗೆಟಿವ್ ಗುಣಗಳಿರುವ ನಾಯಕನ ಪಾತ್ರ.


ದೀಪಾವಳಿಗೆ ಚಿತ್ರತಂಡ ದಿಗಂತ್ ಅವರ ಲುಕ್ ನ್ನು ಬಿಡುಗಡೆ ಮಾಡಿದೆ. ಕಾಮಿಡಿ ಥ್ರಿಲ್ಲರ್ ಚಿತ್ರದಲ್ಲಿ ದಿಗಂತ್ ಅರ್ಜುನ್ ಆಗಿ ಅಭಿನಯಿಸುತ್ತಿದ್ದು ಅವರಿಗೆ ಕವಿತಾ ಗೌಡ ನಾಯಕಿ. 


ಚಿತ್ರದ ಇಡೀ ದೃಶ್ಯಗಳನ್ನು ರಾತ್ರಿ ಹೊತ್ತು ಚಿತ್ರೀಕರಿಸಬೇಕಂತೆ.ಹೀಗಾಗಿ ಇತ್ತೀಚೆಗೆ ಭಾರೀ ಮಳೆ ಬರುತ್ತಿರುವುದರಿಂದ ಚಿತ್ರೀಕರಣವನ್ನು ಈ ತಿಂಗಳಾಂತ್ಯಕ್ಕೆ ಮುಂದೂಡಲಾಗಿದೆ. 


ಚಿತ್ರಕ್ಕೆ ಆನಂದ್ ರಾಜ್ ವಿಕ್ರಮ್ ಸಂಗೀತ, ಅಭಿಲಾಷ್ ಕಲ್ಲಟಿ ಛಾಯಾಗ್ರಹಣವಿದೆ.ಈ ಮಧ್ಯೆ ದಿಗಂತ್ ಅವರು ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ, ಗಾಳಿಪಟ-2 ಮತ್ತು ವೇರ್ ಈಸ್ ಮೈ ಕನ್ನಡ ಚಿತ್ರಗಳಲ್ಲಿ ಕೂಡ ಅಭಿನಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT