ವಿ. ರವಿಚಂದ್ರನ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಕನಸುಗಾರ ರವಿಚಂದ್ರನ್ ಗೆ ಗೌರವ ಡಾಕ್ಟರೇಟ್

ಸ್ಯಾಂಡಲ್ ವುಡ್ ಕನಸುಗಾರ, "ಪ್ರೇಮಲೋಕ"ದ ಮೂಲಕ ಜಾದೂ ಮಾಡಿದ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರೀಗ ಡಾ. ರವಿಚಂದ್ರನ್ ಆಗಿದ್ದಾರೆ. 

ಬೆಂಗಳೂರು: ಸ್ಯಾಂಡಲ್ ವುಡ್ ಕನಸುಗಾರ, "ಪ್ರೇಮಲೋಕ"ದ ಮೂಲಕ ಜಾದೂ ಮಾಡಿದ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರೀಗ ಡಾ. ರವಿಚಂದ್ರನ್ ಆಗಿದ್ದಾರೆ. 

ಸಿಎಂ‌ಆರ್ ಯೂನಿವರ್ಸಿಟಿ.ಸ್ಯಾಂಡಲ್ ವುಡ್ ನಟ, ನಿರ್ದೇಶಕ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ನವೆಂಬರ್ 3ರಂದು ನಡೆಯುವ ವಿಶ್ವವಿದ್ಯಾನಿಲಯದ ಕಾರ್ಯಕ್ರಮದಲ್ಲಿ ರವಿಚಂದ್ರನ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಲಾಗುತ್ತದೆ.

ಮೂರು ದಶಕಗಳಿಂದ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳನ್ನು ಮಾಡುತ್ತಾ ನಾಯಕನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಸ್ಯಾಂಡಲ್ ವುಡ್ ಕಿಂದರಿಜೋಗಿಗೆ ದಾಕ್ಟರೇಟ್ ದೊರಕಿರುವುದು ಅವರ ಅಭಿಮಾನಿಗಳಿಗೆ ಹಿಡಿಸಲಾಗದಷ್ಟು ಖುಷಿ ಕೊಟ್ಟಿದೆ.

ಕನ್ನಡ ಚಿತ್ರರಂಗದಲ್ಲಿ ವರನಟ ರಾಜ್‍ಕುಮಾರ್ ಮೊದಲ ಬಾರಿಗೆ ದಾಕ್ಟರೇಟ್ ಗೌರವಕ್ಕೆ ಪಾತ್ರರಾಗಿದ್ದರು. ಆ ನಂತರ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿ ಹಲವರಿಗೆ ಈ ಗೌರವ ಸಿಕ್ಕಿದೆ. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಈ ಪುರಸ್ಕರಾ ದೊರಕಿರುವುದು ಚಿತ್ರರಂಗಕ್ಕೆ ಇನ್ನೊಂದು ಹೆಮ್ಮೆಯ ಗರಿ ಮೂಡಿಸಿದೆ.

ನಾದಬ್ರಹ್ಮ ಹಂಸಲೇಖಾ-ರವಿಚಂದ್ರನ್ ಜತೆಯಾಗಿ ನಿರ್ಮಿಸಿದ ಚಿತ್ರಗಳಲ್ಲಿ ಬಹುತೇಕ ಎಲ್ಲಾ ಚಿತ್ರಗಳೂ ಗಲ್ಲಾ ಪೆಟ್ಟಿಗೆಯಲ್ಲಿ ಯಶಸ್ವಿಯಾಗಿದೆ. ಇನ್ನು ಅವರ ಚಿತ್ರದ ಹಾಡುಗಳಂತೂ ಚಿತ್ರಸಂಗೀತಕ್ಕೆ ಹೊಸ ಆಯ್ಮವನ್ನೇ ನೀಡಿದವೆನ್ನಲು ಅಡ್ಡಿಯಿಲ್ಲ. "ಪ್ರೇಮಲೋಕದಿಂದ ಇತ್ತೀಚಿನ ಬಹುಕೋಟಿ ವೆಚ್ಚದ ಅದ್ದೂರಿ ಚಿತ್ರ "ಮುನಿರತ್ನ ಕುರುಕ್ಷೇತ್ರ"ವರೆಗೆ ರವಿಚಂದ್ರನ್ ಸಾಕಷ್ಟು ಯಶಸ್ವಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT