ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಗಣೇಶೋತ್ಸವದಲ್ಲಿ ತಮಟೆ ಸದ್ದಿಗೆ 'ದೊಡ್ಮನೆ ಹುಡುಗರ' ಬಿಂದಾಸ್ ಸ್ಟೆಪ್!

ದೊಡ್ಮನೆ ಹುಡುಗರು ಸದಾಶಿವನಗರದಲ್ಲಿ ಗಣೇಶೋತ್ಸವದಲ್ಲಿ ಸ್ಟಾರ್ ಗಳೆಂಬ ಹಮ್ಮು ಬಿಮ್ಮು ಬಿಟ್ಟು ಜನಸಾಮಾನ್ಯರೊಂದಿಗೆ  ಬಿಂದಾಸ್ ಸ್ಟೆಪ್ ಹಾಕಿದ್ದಾರೆ.  

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಸಮಾಜಕ್ಕೆ  ದೊಡ್ಮನೆ ಕೊಡುಗೆ ಅಪಾರ ಹಾಗೂ ಅನನ್ಯವಾಗಿದೆ.ಕನ್ನಡ ನೆಲ, ಜಲ, ಸಂಸ್ಕೃತಿ, ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಈ ಮನೆಯ ಪಾತ್ರ ಮಹತ್ವದು.

ಈ ಮನೆಯ ಯಜಮಾನ, ಕನ್ನಡ ನಾಡಿನ ಮೇರು ನಟ ಅಣ್ಣಾವ್ರು  ನಮ್ಮನ್ನು ಭೌತಿಕವಾಗಿ ಅಗಲಿ ಹಲವು ವರ್ಷಗಳಾಗಿದ್ದರೂ ನಾಡಿನ ಮನೆ ಮನೆ ಹಾಗೂ ಜನರ ಮನಸ್ಸಿನಲ್ಲಿ ಚಿರಿಸ್ಥಾಯಿಯಾಗಿ ಉಳಿದಿದ್ದಾರೆ.ಇವರ ಪುತ್ರರಾದ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್  ನಟ ಸೌರ್ವಭೌಮನ ಹೆಸರಿಗೆ ಕಳಂಕ ಬಾರದ ರೀತಿಯಲ್ಲಿ ಬದುಕು ಸಾಗಿಸುವುದರ ಜೊತೆಗೆ ನೆಲ, ಸಂಸ್ಕೃತಿ, ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ.

ಇಂತಹ ಹಿನ್ನೆಲೆ ಹೊಂದಿರುವ  ದೊಡ್ಮನೆ ಹುಡುಗರು ಸದಾಶಿವನಗರದಲ್ಲಿ ಗಣೇಶೋತ್ಸವದಲ್ಲಿ ಸ್ಟಾರ್ ಗಳೆಂಬ ಹಮ್ಮು ಬಿಮ್ಮು ಬಿಟ್ಟು ಜನಸಾಮಾನ್ಯರೊಂದಿಗೆ  ಬಿಂದಾಸ್ ಸ್ಟೆಪ್ ಹಾಕಿದ್ದಾರೆ.  ರಾಘವೇಂದ್ರ ರಾಜ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಹಾಗೂ ವಿನಯ್ ರಾಜ್ ಕುಮಾರ್  ರಸ್ತೆಯಲ್ಲಿ ತಮಟೆ ಸದ್ದಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

ಈ ಮೂಲಕ ಅಲ್ಲಿದ್ದವರನ್ನು ಡ್ಯಾನ್ಸ್ ಮಾಡುವಂತೆ ಪ್ರೋತ್ಸಾಹಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುಟುಂಬದ ಸರಳತೆಗೆ ಹಿಡಿದಿ ಕೈಗನ್ನಡಿಯಂತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT