ಉಪೇಂದ್ರ 
ಸಿನಿಮಾ ಸುದ್ದಿ

ಬುದ್ಧಿವಂತನ ನೊಂದಿಗೆ ಭಿನ್ನಾಭಿಪ್ರಾಯ: 'ಬುದ್ಧಿವಂತ 2' ನಿರ್ದೇಶನದಿಂದ ಮೌರ್ಯ ಹೊರಕ್ಕೆ!

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬುದ್ಧಿವಂತ 2 ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಬೇಕಿದ್ದ ನವ ನಿರ್ದೇಶಕ ಮೌರ್ಯ ಚಿತ್ರದಿಂದ ಹೊರಬಂದಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬುದ್ಧಿವಂತ 2 ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಬೇಕಿದ್ದ ನವ ನಿರ್ದೇಶಕ ಮೌರ್ಯ ಚಿತ್ರದಿಂದ ಹೊರಬಂದಿದ್ದಾರೆ. 

20 ದಿನಗಳ ಹಿಂದಷ್ಟೇ ಚಿತ್ರದ ಚಿತ್ರೀಕರಣ ಭರದಿಂದ ಸಾಗಿತ್ತು. ಇದೀಗ ನಿರ್ದೇಶಕರು ಚಿತ್ರದಿಂದ ಹೊರಬಂದಿದ್ದಾರೆ. ನಟ ಉಪೇಂದ್ರ ಮತ್ತು ನಿರ್ದೇಶಕ ನಡುವೆ ಸೃಜನಶೀಲ ವ್ಯತ್ಯಾಸಗಳಿಂದ ನಿರ್ದೇಶಕರು ನಿರ್ದೇಶನದಿಂದ ಹೊರ ಬಂದಿದ್ದಾರೆ.

ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಪ್ರೊಡೆಕ್ಷನ್ ಹೌಸ್ ಮೂಲಕ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿತ್ತು. ಇದೀಗ ಚಿತ್ರದ ನಿರ್ದೇಶನಕ್ಕೆ ನವ ನಿರ್ದೇಶಕ ಜಯರಾಮ್ ಮುಂದಾಗಿದ್ದಾರೆ. ಜಯರಾಮ್ ಅವರು ಐ ಲವ್ ಯೂ ಚಿತ್ರದಲ್ಲಿ ಆರ್ ಚಂದ್ರು ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು. 

ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ನಟ ಉಪೇಂದ್ರ ಅವರು ಇಂದು ನಿರ್ದೇಶಕರು ಹೊಸ ಆಲೋಚನೆಗಳು ಮತ್ತು ಹೊಸ ದೃಷ್ಟಿಯೊಂದಿಗೆ ನಿರ್ದೇಶನಕ್ಕೆ ಬರುತ್ತಿದ್ದಾರೆ. ಅದೇ ರೀತಿ ನವ ನಿರ್ದೇಶಕ ಮೌರ್ಯ ಸಹ ಒಬ್ಬರು ಎಂದು ಗುಣಗಾನ ಮಾಡಿದ್ದರು. ಆದರೆ ಇದೀಗ ನಿರ್ದೇಶನದಿಂದ ಮೌರ್ಯ ಹೊರಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT