ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ 
ಸಿನಿಮಾ ಸುದ್ದಿ

ಕರ್ಮ, ಪ್ರತೀಕಾರದ ಅವಶ್ಯಕತೆಯಿಲ್ಲ: ದರ್ಶನ್ ಪತ್ನಿ ನಿಗೂಢ ಟ್ವೀಟ್ ಯಾರಿಗೆ? 

ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಡಿರುವ ನಿಗೂಢ ಟ್ವೀಟ್ ವೊಂದು ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಡಿರುವ ನಿಗೂಢ ಟ್ವೀಟ್ ವೊಂದು ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ. 

ಕರ್ಮ, ಪ್ರತೀಕಾರದ ಅವಶ್ಯಕತೆಯೇ ಇಲ್ಲ, ಸುಮ್ಮನೆ ಕುಳಿತು ಕಾದು ನೋಡುತ್ತಿದ್ದರೆ ಸಾಕು. ನಿನ್ನನ್ನು ನೋಯಿಸಿದವರು ಕ್ರಮೇಣ ತಮ್ಮನ್ನು ತಾವೇ ನಾಶ ಮಾಡಿಕೊಳಅಳುತ್ತಾರೆ. ನೀವು ಅದೃಷ್ಟವಂತರಾಗಿದ್ದರೆ, ಅದನ್ನೆಲ್ಲ ನೋಡುವ ಅವಕಾಶವನ್ನೂ ದೇವರು ನಿಮಗೆ ನೀಡುತ್ತಾನೆಂದು ಟ್ವೀಟ್ ಮಾಡಿದ್ದಾರೆ. 

ಈ ಸಂದೇಶವನ್ನು ಚಪ್ಪಾಳೆ ಹಾಗೂ ನಗುಮುಖದ ಸ್ಮೈಲಿಗಳ ಜೊತೆಗೆ ಯಾರ ಹೆಸರನ್ನೂ ಹಾಕದೆ, ಯಾರಿಗೆ ತಲುಪಬೇಕೋ ಅವರಿಗೆ ತಲುವಂತೆ ವಿಜಯಲಕ್ಷ್ಮೀಯವರು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಇದೀಗ ಚಿತ್ರರಂದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 

ವಿಜಯಲಕ್ಷ್ಮೀ ಮತ್ತು ದರ್ಶನ್ ಸಾಂಸಾರಿಕ ಜೀವನದಲ್ಲಿ ಬಿರುಕು ಬಿಟ್ಟಿದ್ದ ಸುದ್ದಿಗಳು ಹಲವು ವರ್ಷಗಳ ಹಿಂದೆಯೇ ಬಂದಿದ್ದವು. ದರ್ಶನ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಕೆಲವು ವರ್ಷಗಳ ಹಿಂದೆ ವಿಜಯಲಕ್ಷ್ಮಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಆಮೇಲೆ ಆ ಪ್ರಕರಣ ಸುಖಾಂತ್ಯ ಕಂಡಿತ್ತು. ನಂತರ ದರ್ಶನ್ ಮತ್ತು ವಿಜಯಲಕ್ಷ್ಮೀ ಜೊತೆಯಲ್ಲಿದ್ದಾರೆಂಬ ಸುದ್ದಿಗಳೂ ಬಂದಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT