ಯಶ್ 
ಸಿನಿಮಾ ಸುದ್ದಿ

'ಜನಗಣಮನ' ದಿಂದ ವಿಜಯ್ ದೇವರಕೊಂಡ ಔಟ್: ರಾಕಿ ಬಾಯ್ ಗೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್!

ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಜಗನ್ನಾಥ್ ಜನಗಣಮನ ಸಿನಿಮಾ ನಿರ್ದೇಶಿಸುತ್ತಿದ್ದು, ತೆಲುಗು ನಟ ವಿಜಯ ದೇವರಕೊಂಡ ಬದಲಿಗೆ ರಾಕಿ ಬಾಯ್ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಜಗನ್ನಾಥ್ ಜನಗಣಮನ ಸಿನಿಮಾ ನಿರ್ದೇಶಿಸುತ್ತಿದ್ದು, ತೆಲುಗು ನಟ ವಿಜಯ ದೇವರಕೊಂಡ ಬದಲಿಗೆ ರಾಕಿ ಬಾಯ್ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್-2 ಸಿನಿಮಾದಲ್ಲಿ ನಟಿಸುತ್ತಿರುವ ಯಶ್ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ, ಜನಗಣಮನ ಸಿನಿಮಾ ಸಂಬಂಧ ಪುರಿ ಜಗನ್ನಾಥ್ ಮತ್ತು ಈಗಾಗಲೇ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪುರಿ ಜಗನ್ನಾಥ್ ನಿರ್ದೇಶನದ ಸಿನಿಮಾದಿಂದ ಯಶ್ ಹೊರ ನಡೆದಿದ್ದರು, ಹೀಗಾಗಿ ಡಿಯರ್ ಕಾಮ್ರೆಡ್ ಖ್ಯಾತಿಯ ವಿಜಯ ದೇವರಕೊಂಡ ಜನಗಣಮನ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. 

ಆದರೆ ಇತ್ತೀಚಿನ ಮಾಹಿತಿಗಳ ಪ್ರಕಾರ ಜನಗಣಮನದಲ್ಲಿ ಯಶ್ ನಟಿಸಲಿದ್ದಾರೆ ಎಂಬುದು ಖಚಿತವಾಗಿದೆ. ಇನ್ನೂ ಇಸ್ಮಾರ್ಟ್ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಟಿಸುತ್ತಿದ್ದು,ವಿಭಿನ್ನ ಕಥಾ ಹಂದರ ಹೊಂದಿದೆ.

ಯಶ್ ಅಭಿನಯದ ಈ ಸಿನಿಮಾವನ್ನು ಪುರಿ ಜಗನ್ನಾಥ್ ಬೃಹತ್ ವೆಚ್ಚದ ಬಜೆಟ್ ನಲ್ಲಿ ತಯಾರಿಸಲಿದ್ದಾರೆ.ಪ್ಯಾನ್ ಇಂಡಿಯಾ ಆ್ಯಕ್ಷನ್ ಪ್ಲಿಕ್ ಸಿನಿಮಾ ನಿರ್ಮಾಣ ಮಾಡಲಿದೆ. ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ತಯಾರಾಗಲಿದೆ, ಏಕಕಾಲದಲ್ಲಿ ಹಿಂದಿ ಮತ್ತು ತಮಿಳು ಭಾಷೆಗೂ ಡಬ್ ಆಗಲಿದೆ.

ಈ ಸಿನಿಮಾದಲ್ಲಿ ದೇಶಭಕ್ತಿ ಕಥೆಯನ್ನು ಪುರಿ ತರುತ್ತಿದ್ದಾರಂತೆ, ಕೆಜಿಎಪ್-2 ಸಿನಿಮಾ ಶೂಟಿಂಗ್ ಪೂರ್ಣಗೊಂಡ ನಂತರ ಪುರಿ ಸಿನಿಮಾ ಆರಂಭವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT