ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ನನಗೆ ಬಳೆಯ ಮೇಲೆ ತುಂಬಾ ಗೌರವವಿದೆ, ಮಹಿಳೆಯರಿಗೆ ಅಗೌರವ ತೋರಿಸಿಲ್ಲ:ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಬಿಡುಗಡೆಯಾಗಿ ಪೈರಸಿಯಾದ ನಂತರ ಹಲವು ಬೆಳವಣಿಗೆಗಳಾದವು.

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಬಿಡುಗಡೆಯಾಗಿ ಪೈರಸಿಯಾದ ನಂತರ ಹಲವು ಬೆಳವಣಿಗೆಗಳಾದವು. ದರ್ಶನ್ ಅಭಿಮಾನಿಗಳೇ ಚಿತ್ರವನ್ನು ಆನ್ ಲೈನ್ ನಲ್ಲಿ ಹರಿಬಿಟ್ಟಿದ್ದಾರೆ ಎಂದು ಸುದೀಪ್ ಅಭಿಮಾನಿಗಳು ಆರೋಪ ಮಾಡಿ ಅದು ನಂತರ ಸ್ಟಾರ್ ವಾರ್ ಗೆ ತಿರುಗಿತು. ಪರಸ್ಪರ ಆರೋಪ-ಪ್ರತ್ಯಾರೋಪಗಳು ಸಾಕಷ್ಟು ನಡೆದವು. 


ಈ ಮಧ್ಯೆ ಕಿಚ್ಚ ಸುದೀಪ್ ಮೊನ್ನೆ ಮಾಡಿದ್ದ ಬಳೆ-ಕಡಗದ ಟ್ವೀಟ್ ಭಾರೀ ಸುದ್ದಿಯಾಗಿ ಮಹಿಳೆಯರಿಗೆ ಸುದೀಪ್ ಅವಮಾನ ಮಾಡಿದ್ದಾರೆ ಎಂದು ಸಾಕಷ್ಟು ಟೀಕೆಗಳು ಕೇಳಿಬಂದವು. 


ಈ ಬಗ್ಗೆ ಖಾಸಗಿ ಸುದ್ದಿವಾಹಿನಿ ಜೊತೆ ಸಂದರ್ಶನ ವೇಳೆ ಪ್ರತಿಕ್ರಿಯೆ ನೀಡಿದ ಅವರು, ನಾನು ಟ್ವಿಟ್ಟರನ್ನು ದುರುಪಯೋಗಪಡಿಸಿಕೊಂಡಿಲ್ಲ. ನನ್ನ ಮನಸ್ಸಿನಲ್ಲಿರುವುದನ್ನು ಅಲ್ಲಿ ಹೇಳಿಕೊಂಡಿದ್ದೇನೆ. ನನಗೆ ಅನ್ನಿಸಿದ್ದನ್ನು ಟ್ವಿಟ್ಟರ್ ಬಿಟ್ಟರೆ ಬೇರೆ ಎಲ್ಲಿ ಹೇಳಿಕೊಳ್ಳಲಿ ಎಂದು ಕೇಳಿದರು. 


ನಾನು ಯಾರ ತಂಟೆಗೂ ಹೋಗಲ್ಲ. ನನ್ನ ಸಿನಿಮಾ ಬಗ್ಗೆ ನಾನು ಧ್ವನಿ ಎತ್ತದೇ ಇನ್ನು ಯಾರು ಮಾತನಾಡುತ್ತಾರೆ. ನಾನು ನನ್ನ ನಿರ್ಮಾಪಕರ ಪರವಾಗಿ ನಿಂತಿದ್ದೇನೆ. ಅದರಲ್ಲಿ ನನಗೆ ಯಾವುದೇ ತಪ್ಪು ಕಾಣಿಸುತ್ತಿಲ್ಲ. ಟ್ವಿಟ್ಟರ್ ನಲ್ಲಿ ನಾನು ಒಳ್ಳೆಯದನ್ನು ಹೇಳಿದ್ದೇನೆ. ನನಗೆ ಏನು ಹೇಳಬೇಕು ಎಂದು ಅನಿಸಿತೋ ಅದನ್ನು ಹೇಳುತ್ತೇನೆ. ನನ್ನ ಉದ್ದೇಶ ಸರಿಯಲ್ಲ ಎಂದರೆ ನನಗೆ ಗೊತ್ತಾಗುತ್ತೆ. ನಾನು ವೈಯಕ್ತಿವಾಗಿ ಟ್ವೀಟ್ ಮಾಡಿಲ್ಲ. ನನ್ನ ಸಿನಿಮಾಗಾಗಿ ಟ್ವೀಟ್ ಮಾಡಿದ್ದೇನೆ ಎಂದು ಹೇಳಿದರು. 


ನಾನು ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ ಬಳೆಯಲ್ಲ ಎಂಬ ಟ್ವೀಟ್ ವಿಚಾರವಾಗಿ ಮಾತನಾಡಿದ ಕಿಚ್ಚ, ಕೆಲ ದಿನಗಳ ಹಿಂದೆ ನನಗೆ ಕೆಲ ಸಂದೇಶಗಳು ಬಂದಿದ್ದವು. ಅದರಲ್ಲಿ ನಿಮ್ಮ ಸ್ನೇಹಿತರಿಗೆ ಬಳೆ ಹಾಕಿಕೊಂಡು ಕುಳಿತುಕೊಳ್ಳಲು ಹೇಳಿ ಎಂದು ಕೆಲವರು ಹೇಳಿದ್ದರು. ಅದಕ್ಕಾಗಿ ನಾನು, ನಾವು ಹಾಕಿರುವುದು ಬಳೆಯಲ್ಲ ಕಡಗ ಎಂದು ಹೇಳಿದ್ದೆ ಅಷ್ಟೇ. ನನಗೆ ಬಳೆಯ ಮೇಲೆ ತುಂಬಾ ಗೌರವವಿದೆ. ನನ್ನ ತಾಯಿ ಕೂಡ ಬಳೆ ಹಾಕುತ್ತಾರೆ. ನಾನು ಇಲ್ಲಿ ಯಾರಿಗೂ ಅರ್ಥ ಮಾಡಿಸಲು ಹುಟ್ಟಿಲ್ಲ. ನನ್ನ ಜೀವನ ಚೆನ್ನಾಗಿದ್ದು, ಕನ್ನಡಿ ನನ್ನ ನೋಡಿ ನಗದೆ ಇದ್ದರೆ ಸಾಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT