ಸರ್ಕಾರಿ ಶಾಲೆ ದತ್ತು ಪಡೆದ 'ಡಿಬಾಸ್' ಫ್ಯಾನ್ಸ್-ಶಿಕ್ಷಣ ಸಚಿವರ ಅಭಿನಂದನೆ 
ಸಿನಿಮಾ ಸುದ್ದಿ

ಸರ್ಕಾರಿ ಶಾಲೆ ದತ್ತು ಪಡೆದ 'ಡಿಬಾಸ್' ಫ್ಯಾನ್ಸ್-ಶಿಕ್ಷಣ ಸಚಿವರ ಅಭಿನಂದನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ’ಡಿ ಕಂಪನಿ’ ಹಾಸನ ಜಿಲ್ಲೆಯ ಕುಗ್ರಾಮದಲ್ಲಿರುವ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದಿದ್ದು, ಸಾರ್ವಜನಿಕರ ಪ್ರಶಂಸೆ ಹಾಗೂ ಶಿಕ್ಷಣ ಸಚಿವರು ಮೆಚ್ಚುಗೆಗೆ ಪಾತ್ರವಾಗಿದೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ’ಡಿ ಕಂಪನಿ’ ಹಾಸನ ಜಿಲ್ಲೆಯ ಕುಗ್ರಾಮದಲ್ಲಿರುವ ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದಿದ್ದು, ಸಾರ್ವಜನಿಕರ ಪ್ರಶಂಸೆ ಹಾಗೂ ಶಿಕ್ಷಣ ಸಚಿವರು ಮೆಚ್ಚುಗೆಗೆ ಪಾತ್ರವಾಗಿದೆ

ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಸರ್ಕಾರಿ ಶಾಲೆಯನ್ನು ಎರಡು ವರ್ಷಗಳಿಗಾಗಿ ’ಡಿ ಕಂಪನಿ’ ದತ್ತು ಪಡೆದಿದ್ದು, ಅಭಿವೃದ್ಧಿಗೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಮೊದಲಾದ ವ್ಯವಸ್ಥೆಗಳನ್ನು ಡಿ ಕಂಪನಿ ಒದಗಿಸಲು ಮುಂದಾಗಿದೆ.  ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚಲು ನಿರ್ಧರಿಸಿದೆ.

ದರ್ಶನ್ ಅಭಿಮಾನಿಗಳ ಈ ಕಾರ್ಯವನ್ನು ರಾಮೇನಹಳ್ಳಿಯ ನಿವಾಸಿಗಳು, ಶಾಲಾ ಮಕ್ಕಳ ಪೋಷಕರು ಶ್ಲಾಘಿಸಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್, ಅನುಕರಣೀಯ ಕಾರ್ಯ ಮಾಡಿರುವ ದರ್ಶನ್ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT