ಗಾಯಕ ವಿಜಯ್ ಪ್ರಕಾಶ್ 
ಸಿನಿಮಾ ಸುದ್ದಿ

ಕೊರೋನಾ ವಿರುದ್ಧ ಹೋರಾಟಕ್ಕೆ 10 ಲಕ್ಷ ನೆರವಿತ್ತ ಗಾಯಕ ವಿಜಯ್ ಪ್ರಕಾಶ್

ಎಲ್ಲೆಲ್ಲೂ ಈಗ ಕೊರೋನಾ ಹಾವಳಿಯದೇ ಸುದ್ದಿ, ದೇಶಾದ್ಯಂತ ಕೊರೋನಾ ಹರಡುವಿಕೆ ತಡೆಗೆ ಲಾಕ್ ಡೌನ್ ಮಾಡಲಾಗಿದ್ದು ಚಿತ್ರರಂಗದ ಗಣ್ಯಾತಿಗಣ್ಯರು ಮನೆಗಳಲ್ಲೇ ಉಳಿಯುವಂತಾಗಿದೆ. ಇನ್ನು ಅನೇಕ ನಟ, ನಿರ್ಮಾಪಕರು ದೇಶದ ಈ ಸಂಕಷ್ಟ ಪರಿಸ್ಥಿತಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಇದರಲ್ಲಿ ಕನ್ನಡದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಸಹ ಒಬ್ಬರು. ಗಾಯಕ ವಿಜಯ್ ಪ್ರಕಾಶ್ ತಾವು ಮುಖ್

ಎಲ್ಲೆಲ್ಲೂ ಈಗ ಕೊರೋನಾ ಹಾವಳಿಯದೇ ಸುದ್ದಿ, ದೇಶಾದ್ಯಂತ ಕೊರೋನಾ ಹರಡುವಿಕೆ ತಡೆಗೆ ಲಾಕ್ ಡೌನ್ ಮಾಡಲಾಗಿದ್ದು ಚಿತ್ರರಂಗದ ಗಣ್ಯಾತಿಗಣ್ಯರು ಮನೆಗಳಲ್ಲೇ ಉಳಿಯುವಂತಾಗಿದೆ. ಇನ್ನು ಅನೇಕ ನಟ, ನಿರ್ಮಾಪಕರು ದೇಶದ ಈ ಸಂಕಷ್ಟ ಪರಿಸ್ಥಿತಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಇದರಲ್ಲಿ ಕನ್ನಡದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಸಹ ಒಬ್ಬರು. ಗಾಯಕ ವಿಜಯ್ ಪ್ರಕಾಶ್ ತಾವು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹತ್ತು ಲಕ್ಷ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

"ಕೆರೆಯ ನೀರನು ಕೆರೆಗೆ ಚೆಲ್ಲೀ ವರವ ಪಡೆದವರಂತೆ ಕಾಣಿರೊ. ಜನರು ನನಗೆ ನೀಡಿರುವ ಪ್ರೀತಿಯ ಬೊಗಸೆಯಿಂದ ಚಿಕ್ಕ ಸೇವೇ. ನಾವೆಲ್ಲರೊ ಕೈ ಜೋಡಿಸಿದರೇ ಕರೊನಾ ನ ಗೆಲ್ಲಬಹುದು." ಎ<ದು ಟ್ವೀಟ್ ಮಾಡಿರುವ ವಿಜಯ್ ಪ್ರಕಾಶ್ ಪಿಎಂ ಪ್ರೈಹಾರ ನಿಧಿ ಹಾಗೂ ಇನ್ನೂ ಕೆಲ ರಾಜ್ಯಗಳ ಪರಿಹಾರ ನಿಧಿಗೆ ಸಹ ಒಂದು ಅಳಿಲು ದೇಣಿಗೆ ನಿಡಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಈ ಸಮಯದಲ್ಲಿ ನಾವೆಲ್ಲರೂ ಕೈಜೋಡಿಸಿ ನಿಂತರೆ ಕೊರೋನಾ ಮಹಾಮಾರಿಯನ್ನು ಗೆದ್ದು ಮೊದಲಿನಂತೆಯೇ ಸಮಾಯಜದಲ್ಲಿ ಸುಖವಾಗಿ, ಸಂತೋಷವಾಗಿ ಬದುಕಲು ಸಾಧ್ಯ ಎಂದು ಸಹ ವಿಜಯ್ ಪ್ರಕಾಶ್ ನುಡಿದಿದ್ದಾರೆ.

ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಗಾಯಕ ವಿಜಯ್ ಪ್ರಕಾಶ್ ಹಾಗೂ ಇತರರಿಗೆ 'ಮುಖ್ಯಮಂತ್ರಿ ಪರಿಹಾರ ನಿಧಿ'ಗೆ ದೇಣಿಗೆ ನೀಡಿ ಕೋವಿಡ್ ಹೋರಾಟಕ್ಕೆ ಕೈಜೋಡಿಸಿರುವ ಎಲ್ಲರಿಗೆ ಧನ್ಯವಾದ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT