ಶರ್ಮಿಳಾ ಮಾಂಡ್ರೆ 
ಸಿನಿಮಾ ಸುದ್ದಿ

ಲಾಕ್ ಡೌನ್ ವೇಳೆ ಜಾಲಿ ರೈಡ್ ಅಪಘಾತ: ಪರಾರಿಯಾಗಿದ್ದ ನಟಿ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?

ತಾವು ಯಾವುದೇ ಪಾರ್ಟಿ ಮಾಡಲು ಲಾಕ್‌ಡೌನ್‌ ಸಂದರ್ಭದಲ್ಲಿ ಹೊರಗೆ ಹೋಗಿರಲಿಲ್ಲ, ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿಗಾಗಿ  ಮನೆಯಿಂದ ಸ್ನೇಹಿತರ ಕಾರಿನಲ್ಲಿ ಹೋಗಿದ್ದೆ ಎಂದು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸ್ಯಾಂಡಲ್‌ವುಡ್‌ ನಟಿ  ಶರ್ಮಿಳಾ ಮಾಂಡ್ರೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ತಾವು ಯಾವುದೇ ಪಾರ್ಟಿ ಮಾಡಲು ಲಾಕ್‌ಡೌನ್‌ ಸಂದರ್ಭದಲ್ಲಿ ಹೊರಗೆ ಹೋಗಿರಲಿಲ್ಲ, ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿಗಾಗಿ  ಮನೆಯಿಂದ ಸ್ನೇಹಿತರ ಕಾರಿನಲ್ಲಿ ಹೋಗಿದ್ದೆ ಎಂದು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸ್ಯಾಂಡಲ್‌ವುಡ್‌ ನಟಿ  ಶರ್ಮಿಳಾ ಮಾಂಡ್ರೆ ಸ್ಪಷ್ಟಪಡಿಸಿದ್ದಾರೆ.

ನಿನ್ನೆ ನಡೆದ ಅಪಘಾತದ ಸುದ್ದಿ ವೈರಲ್ ಆಗಿದೆ ಎಂದು ಕೆಲವರು ತಮಾಷೆಯಾಗಿ ಮಾತನಾಡಿದ್ದಾರೆ. ನಾನು  ಔಷಧಿಯನ್ನು ಖರೀದಿಸಲು ಮಾತ್ರ ಮನೆಯಿಂದ ಹೊರ ಹೋಗಿದ್ದೆ. ಲಾಕ್‌ಡೌನ್ ಸಮಯದಲ್ಲಿ ಓಡಾಡಲು  ಪಾಸ್ ಹೊಂದಿದ್ದ ಸ್ನೇಹಿತರ ಸಹಾಯವನ್ನು ಪಡೆದಿದ್ದೆ ಅಷ್ಟೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನನಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಗ ನನ್ನ  ಸ್ನೇಹಿತರಾದ ಲೋಕೇಶ್ ಮತ್ತು ಡಾನ್ ಥಾಮಸ್ ಇಬ್ಬರ ಸಹಾಯವನ್ನು ಕೇಳಿದೆ. ಏಕೆಂದರೆ ಅವರ  ಬಳಿ ಲಾಕ್‌ಡೌನ್ ವೇಳೆ ಓಡಾಡುವ ಪಾಸ್ ಇತ್ತು. ಹೀಗಾಗಿ ನನ್ನನ್ನು ಹತ್ತಿರದ ಆಸ್ಪತ್ರೆಗೆ  ಕರೆದುಕೊಂಡು ಹೋಗುವಂತೆ ಮನವಿ ಮಾಡಿಕೊಂಡೆ. ಈ ವೇಳೆ ಅಪಘಾತವಾಗಿದೆ. ಆದರೆ ನಾನು ಕಾರು  ಓಡಿಸುತ್ತಿರಲಿಲ್ಲ. ಕಾರಿನ ಹಿಂಬದಿ ಸೀಟಿನಲ್ಲಿ ನಾನು ಕುಳಿತಿದ್ದೆ. ನನ್ನ ಸ್ನೇಹಿತ  ಡಾನ್ ಕಾರು ಓಡಿಸುತ್ತಿದ್ದ. ಈ ಅಪಘಾತದಲ್ಲಿ ನನ್ನ ಕುತ್ತಿಗೆಗೆ ಪೆಟ್ಟಾಗಿದೆ ಎಂದು ಶರ್ಮಿಳಾ ಮಾಂಡ್ರೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ