ಸಚಿವ ಆರ್ ಆಶೋಕ್ - ನಟ ಬುಲೆಟ್ ಪ್ರಕಾಶ್ 
ಸಿನಿಮಾ ಸುದ್ದಿ

ಕೊರೋನಾ ವೈರಸ್ ಹಿನ್ನೆಲೆ: ನಟ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ: ಸಚಿವ ಆರ್​ ಅಶೋಕ್

ರಾಜ್ಯದಲ್ಲಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿನ್ನೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿನ್ನೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್ ಅವರು, 'ಕೊರೋನಾ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ​ನಟ ಬುಲೆಟ್ ಪ್ರಕಾಶ್ ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದೇ ರೀತಿಯಾಗಿ ಸೆಲೆಬ್ರಿಟಿಗಳು ಸಹ  ಅಂತಿಮ ದರ್ಶನ ಪಡೆಯುವಂತಿಲ್ಲ. ಆದರೆ, ಸಂಬಂಧಿಕರಿಗಷ್ಟೇ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಲಾಕ್ ಡೌನ್ ಮುಗಿದ ನಂತರ ಕಡಿಮೆ ಜನರು ಪೂಜೆ ಸಂಸ್ಕಾರದಲ್ಲಿ ಭಾಗಿಯಾಗಬಹುದು. ದೂರದಿಂದಲೇ ನಟ ಬುಲೆಟ್​​ ಪ್ರಕಾಶ್​ ಅವರಿಗೆ ನಮನ ಸಲ್ಲಿಸುವಂತೆ ಅಭಿಮಾನಿಗಳಲ್ಲಿ ಸಚಿವರು  ಮನವಿ ಮಾಡಿದ್ದಾರೆ.

ಬುಲೆಟ್ ಪ್ರಕಾಶ್ ನನ್ನ ಒಳ್ಳೆಯ ಗೆಳೆಯ: ಆರ್ ಅಶೋಕ್
ಬುಲೆಟ್ ಪ್ರಕಾಶ್ ನನ್ನ ಒಳ್ಳೆಯ ಗೆಳೆಯ ಎಂದು ಹೇಳಿದ ಸಚಿವ ಆರ್ ಅಶೋಕ್, 'ಪ್ರತಿ ತಿಂಗಳು ಇಬ್ಬರು ಭೇಟಿ ಮಾಡುತ್ತಿದ್ವಿ. ಕಿಡ್ನಿ ಟ್ರಾನ್ಸ್‌ಫಾರ್ಮೇಷನ್ ಆಗಬೇಕು ಸಹಾಯ ಮಾಡುವಂತೆ ಕೇಳಿದ. ನಾನು ಒಪ್ಪಿಕೊಂಡಿದ್ದೆ. ಮುಖ್ಯಮಂತ್ರಿಗಳು ಎರಡು ಲಕ್ಷ ರೂಪಾಯಿಯನ್ನು  ಆಪರೇಷನ್​​ಗೆ ಕೊಡುವುದಾಗಿ ಒಪ್ಪಿದ್ದರು. ಆದರೆ ಈಗ ಅವರೇ ಇಲ್ಲ. ಅವರು ಇವತ್ತು ನಮ್ಮೊಂದಿಗೆ ಇಲ್ಲ ಅನ್ನೋದು ದುಃಖ ತಂದಿದೆ. ಇವತ್ತು ಅವರ ದೇಹವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿಲ್ಲ. ಬದಲಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗುತ್ತದೆ. ಅಂತ್ಯಕ್ರಿಯೆ  ಹೆಬ್ಬಾಳದಲ್ಲಿ ನಡೆಯಲಿದೆ. ಆದರೆ, ಅಂತಿಮ ದರ್ಶನಕ್ಕೆ ಯಾವುದೇ ವ್ಯವಸ್ಥೆ ಮಾಡಲಾಗುವುದಿಲ್ಲ ಎಂದು ಹೇಳಿದರು.

ಆಸ್ಪತ್ರೆ ಬಿಲ್ ಕ್ಲೀಯರ್ ಮಾಡಿದ ಅಶೋಕ್
ಇನ್ನು ಬುಲೆಟ್ ಪ್ರಕಾಶ್ ಅವರ ಆಸ್ಪತ್ರೆ ಬಿಲ್ ಗಳನ್ನು ಸಚಿವ ಆರ್.ಅಶೋಕ್ ಅವರೇ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ನಟ ದುನಿಯಾ ವಿಜಿ ಮಾಹಿತಿ ನೀಡಿದ್ದು, 'ಆರ್.ಅಶೋಕ್ ಅವರಿಗೆ ಧನ್ಯವಾದ.‌ ಆಸ್ಪತ್ರೆಯ ಬಿಲ್ ಕ್ಲಿಯರ್ ಮಾಡಿದ್ದಾರೆ. ಇಷ್ಟೊತ್ತಲ್ಲಿ ದೇಹವನ್ನು ಮನೆಗೆ  ತೆಗೆದುಕೊಂಡು ಹೋಗೋದು ಬೇಡ ಅಂತಾ ನಾನು ಮತ್ತು ಪ್ರೇಮ್ ಕುಟುಂಬದ ಮನವೊಲಿಸಿದ್ದೇವೆ. ಹೀಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡುವ ವ್ಯವಸ್ಥೆ ನಡೀತಿದೆ. ನಾಳೆ ಮನೆಯ ಹತ್ತಿರ ತೆಗೆದುಕೊಂಡು ಹೋಗಲಿದ್ದೇವೆ.  ನಾಳೆ ಅಂತ್ಯ ಸಂಸ್ಕಾರ ಎಷ್ಟು ಗಂಟೆಗೆ  ಅಂತಾ ತೀರ್ಮಾನ ಮಾಡಲಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT