ರಾಧಿಕಾ ಕುಮಾರಸ್ವಾಮಿ 
ಸಿನಿಮಾ ಸುದ್ದಿ

ಲಾಕ್ ಡೌನ್: ಮಂಗಳಮುಖಿಯರಿಗೆ ರಾಧಿಕಾ ಕುಮಾರಸ್ವಾಮಿ‌ ನೆರವು

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಆದೇಶ ಹೇರಿರುವ ಹಿನ್ನೆಲೆಯಲ್ಲಿ ಬಡವರು, ನಿರ್ಗತಿಕರು, ಕಾರ್ಮಿಕರು ಸಂಕಷ್ಟ ಕ್ಕೆ ಸಿಲುಕಿದ್ದಾರೆ‌.

ಈಗಾಗಲೇ ಸ್ಯಾಂಡಲ್ ವುಡ್ ನ ಹಲವು ನಟ- ನಟಿಯರು ತಮ್ಮ ಕೈಲಾದ ಸಹಾಯ‌ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಕೂಡ ನೆರವಾಗುತ್ತಿದ್ದಾರೆ.

ರಾಧಿಕಾ ಅವರು ಬಡವರಿಗೆ ವಿಶೇಷವಾಗಿ ಮಂಗಳಮುಖಿಯರಿಗೆ ಸಹಾಯ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಮಂಗಳಮುಖಿಯರು ಹಾಗೂ ಬಡವರನ್ನು ಹುಡುಕಿಕೊಂಡು ಹೋಗಿ ಅಕ್ಕಿ, ಬೇಳೆ ಸೇರಿದಂತೆ ವಿವಿಧ ರೀತಿಯ ಆಹಾರ ಸಾಮಗ್ರಿಗಳನ್ನು ದಾನ ಮಾಡುವ ಮೂಲಕ ಅವರ ಕಷ್ಟಕ್ಕೆ ನೆರವಾಗುತ್ತಿದ್ದಾರೆ.

ರಾಧಿಕಾ ಅವರು, ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿವಿಧ ರೀತಿಯ ಆಹಾರ ಸಾಮಾಗ್ರಿಗಳನ್ನು ಸ್ವತಃ ಅವರೇ ಕೈಯಾರೇ ಹಂಚಿದ್ದಾರೆ. ಈಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿರುವ ಅವರು, ನಾವೆಲ್ಲರೂ ಮಾನವರು, ಇಂತಹ ಸಮಯದಲ್ಲಿ ದುರ್ಬಲರಿಗೆ, ಅಗತ್ಯವಿರುವವರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಭಾವಿಸುತ್ತೇನೆ. ಹೀಗಾಗಿ ಬೆಂಗಳೂರಿನಲ್ಲಿ ಅಗತ್ಯವಿರುವವರಿಗೆ ಸ್ವಯಂ ಪ್ರೇರಣೆಯಿಂದ ಆಹಾರ ಪದಾರ್ಥ ವಿತರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ, ರಾಧಿಕಾ ಕುಮಾರಸ್ವಾಮಿ ಅವರು, ಮಾಗಡಿ ರಸ್ತೆ, ಕೆಂಗೇರಿ, ನಾಯಂಡಹಳ್ಳಿ ಮುಂತಾದ ಏರಿಯಾಗಳಲ್ಲಿ ದಿನಸಿ ವಿತರಿಸಿದ್ದು, 1200ಕ್ಕೂ ಹೆಚ್ಚು ಮನೆಗಳಿಗೆ ಹಂಚಿಕೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

SCROLL FOR NEXT